Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:22 - ಕನ್ನಡ ಸಮಕಾಲಿಕ ಅನುವಾದ

22 ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ, ಅದರಿಂದ ಬುದ್ದಲಿಗಳು ಬಿರಿಯುತ್ತವೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವದಿಲ್ಲ; ಇಟ್ಟರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಬುದ್ದಲಿಗಳು ಎರಡೂ ಕೆಟ್ಟುಹೋಗುವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ [ಹಾಕಿಡತಕ್ಕದ್ದು] ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹಾಗೆಯೇ, ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಬುದ್ದಲಿಗಳಲ್ಲಿ ಹಾಕಿಡುವುದಿಲ್ಲ. ಏಕೆಂದರೆ ಅದು ಬುದ್ದಲಿಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಹಾಳಾಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕೊನ್‍ಬಿ, ನ್ಹವೊ ವಾಯ್ನ್ ಜುನ್ನ್ಯಾ ಚಮ್ಡ್ಯಾಚ್ಯಾ ಪಿಸ್ವಿತ್ ಭರುನ್ ಥೈನಾತ್, ಕಶ್ಯಾಕ್ ಮಟ್ಲ್ಯಾರ್, ಜುನ್ನಿ ಚಮ್ಡ್ಯಾಚಿ ಪಿಸ್ವಿ ಪಿಂಜುನ್ ಸಗ್ಳೊ ವಾಯ್ನ್ ಪಡುನ ಹಾಳ್ ಹೊತಾ. ತಸೆ ಮನುನ್ ಲೊಕಾ ಕನ್ನಾಬಿ, ನ್ಹವೊ ವಾಯ್ನ್ ನ್ಹವ್ಯಾ ಚಮ್ಡ್ಯಾಚ್ಯಾ ಪಿಸ್ವಿತ್ ಭರುನ್ ಥವ್ತ್ಯಾತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:22
9 ತಿಳಿವುಗಳ ಹೋಲಿಕೆ  

ಅಂತೆಯೇ ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ಅವರು ಹಾಗೇನಾದರೂ ಮಾಡಿದರೆ ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ. ಆಗ ಅವೆರಡೂ ಉಳಿಯುತ್ತವೆ,” ಎಂದರು.


ನಾನು ಹೊಗೆಯಲ್ಲಿರುವ ದ್ರಾಕ್ಷಾರಸದ ಚರ್ಮಚೀಲದಂತ್ತಿದ್ದರೂ, ನಿಮ್ಮ ತೀರ್ಪುಗಳನ್ನು ನಾನು ಮರೆಯಲಿಲ್ಲ.


ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು, ಅದರಿಂದ ನಾನು ನಾಚಿಕೆಗೆ ಗುರಿಯಾಗದಿರುವೆನು.


ಈಗ ಅವು ಒಣಗಿ ಬೂಷ್ಟು ಹಿಡಿದವುಗಳಗಿವೆ. ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸದಾಗಿದ್ದವು. ಇಗೋ, ಈಗ ಅವು ಹರಿದು ಹೋಗಿವೆ. ಇದಲ್ಲದೆ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಪ್ರಯಾಣ ಬಹಳ ದೂರವಾದ್ದರಿಂದ ಹಳೆಯದಾಗಿವೆ,” ಎಂದರು.


ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ, ಅವರು ರಾಯಭಾರಿಗಳ ಹಾಗೆ ತೋರಿಸುವಂತೆ ಹಳೆಯ ಗೋಣಿ ಚೀಲಗಳನ್ನೂ ತೇಪೆ ಹಾಕಿದ ಹಳೆಯದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು, ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು ಹೋದರು.


ನನ್ನ ಅಂತರಾತ್ಮವು ತೆರೆಯದ ದ್ರಾಕ್ಷಾರಸದ ಹಾಗೆ ಇದೆ; ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಇದೆ.


“ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಹಚ್ಚಿದರೆ, ಆ ತೇಪೆಯು ಬಟ್ಟೆಯನ್ನು ಹಿಂಜಿ ಹರಕನ್ನು ಇನ್ನೂ ದೊಡ್ಡದು ಮಾಡುತ್ತದೆ.


ಒಂದು ಸಬ್ಬತ್ ದಿನದಂದು ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಯೇಸುವಿನ ಶಿಷ್ಯರು ನಡೆಯುತ್ತಾ ಹೋಗುವಾಗ ತೆನೆಗಳನ್ನು ಮುರಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು