Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:12 - ಕನ್ನಡ ಸಮಕಾಲಿಕ ಅನುವಾದ

12 ಈ ಕಾರಣದಿಂದ, “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು; ಪಾಪಕ್ಷಮೆ ಹೊಂದಿಯಾರು’,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಕಣ್ಣಿದ್ದು ನೋಡಿದರೂ ಕಾಣಬಾರದು, ಕಿವಿಯಿದ್ದು ಕೇಳಿದರೂ ತಿಳುಕೊಳ್ಳಬಾರದು, ಹಾಗೆ ಕಂಡು ತಿಳುಕೊಂಡರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದಾರು ಎಂದೇ ಮರೆಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಏಕೆಂದರೆ: ‘ಅವರು ಕಣ್ಣಾರೆ ನೋಡಿಯೂ ಕಾಣರು. ಕಿವಿಯಾರೆ ಕೇಳಿಯೂ ಗ್ರಹಿಸರು. ಅವರು ನೋಡಿ ಗ್ರಹಿಸಿಕೊಂಡರೆ, ಪರಿವರ್ತನೆಗೊಂಡು ಪಾಪಕ್ಷಮೆ ಹೊಂದಿಯಾರು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆಚ್ಯಾ ಸಾಟ್ನಿ “ತೆನಿ ಬಗಟ್ಲ್ಯಾರ್ಬಿ, ತೆಂಕಾ ದಿಸಿನಾ, ತೆನಿ ಅಯಿಕ್‍ಲ್ಯಾರ್ಬಿ, ತೆಂಕಾ ಕಳಿನಾ, ತೆನಿ ಅಶೆ ಕರ್ಲ್ಯಾರ್, ತೆನಿ ದೆವಾಕ್ಡೆ ಪರ್ತುನ್ ಯೆತಿಲ್, ಅನಿ ತೊ ತೆಂಕಾ ಮಾಪ್ ಕರಿಲ್ ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:12
18 ತಿಳಿವುಗಳ ಹೋಲಿಕೆ  

ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ.


ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.


ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’


ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.


ಬಿದ್ದುಹೋದರೆ, ಅವರನ್ನು ತಿರುಗಿ ಪಶ್ಚಾತ್ತಾಪಕ್ಕೆ ನಡೆಸುವುದು ಅಸಾಧ್ಯ. ಏಕೆಂದರೆ ಅವರು ತಾವಾಗಿಯೇ ದೇವರ ಪುತ್ರ ಆಗಿರುವವರನ್ನು ಪುನಃ ಶಿಲುಬೆಗೆ ಹಾಕುವವರೂ ಅವರನ್ನು ಬಹಿರಂಗವಾಗಿ ಅವಮಾನ ಪಡಿಸುವವರೂ ಆಗಿರುತ್ತಾರೆ.


“ಮನುಷ್ಯಪುತ್ರನೇ, ನೀನು ತಿರುಗಿಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವ, ಅವರಿಗೆ ನೋಡುವುದಕ್ಕೆ ಕಣ್ಣುಗಳುಂಟು, ಆದರೆ ನೋಡುವುದಿಲ್ಲ; ಕೇಳುವುದಕ್ಕೆ ಕಿವಿಗಳುಂಟು, ಕೇಳುವುದಿಲ್ಲ. ಅವರು ತಿರುಗಿಬೀಳುವ ಮನೆತನದವರು.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡರಾದ ಜನರನ್ನು ಕರೆ.


ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.


ಕಣ್ಣುಗಳಿದ್ದೂ ನೀವು ಕಾಣುವುದಿಲ್ಲವೋ? ಕಿವಿಗಳಿದ್ದೂ ನೀವು ಕೇಳುವುದಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು