Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:26 - ಕನ್ನಡ ಸಮಕಾಲಿಕ ಅನುವಾದ

26 ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ದೇವರ ಸಾಮ್ರಾಜ್ಯವು ರೈತನೊಬ್ಬನು ತನ್ನ ಹೊಲದಲ್ಲಿ ಮಾಡಿದ ಬಿತ್ತನೆಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇನ್ನೂ ಆತನು ಅವರಿಗೆ ಹೇಳಿದ್ದು - ಒಬ್ಬನು ಭೂವಿುಯಲ್ಲಿ ಬೀಜವನ್ನು ಹಾಕಿ ರಾತ್ರಿ ಮಲಗುತ್ತಾ ಹಗಲು ಎದ್ದಿರುತ್ತಾ ಇರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಂತರ ಯೇಸು, “ದೇವರ ರಾಜ್ಯವು ಭೂಮಿಯಲ್ಲಿ ಬೀಜ ಬಿತ್ತಿದ ಮನುಷ್ಯನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅನಿ ಫಿಡೆ ಜೆಜುನ್ “ದೆವಾಚೆ ರಾಜ್ ಮಟ್ಲ್ಯಾರ್, ಅಶೆ, ಎಕ್ ಮಾನುಸ್ ಅಪ್ಲ್ಯಾ ಶೆತಾತ್ ಭ್ಹಿಂಯ್ ಪೆರ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:26
24 ತಿಳಿವುಗಳ ಹೋಲಿಕೆ  

ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


“ಆ ಸಾಮ್ಯದ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.


“ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುತ್ತಿರುವಾಗ, ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು; ಅವು ಕಾಲ್ತುಳಿತಕ್ಕೆ ಒಳಗಾದವು, ಆಕಾಶದ ಪಕ್ಷಿಗಳು ಅವುಗಳನ್ನು ಹೆಕ್ಕಿ ತಿಂದವು.


ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.


ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.


ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ.


ಯಾವನು ಗಾಳಿಗಾಗಿ ಕಾದಿರುವನೋ, ಅವನು ಬೀಜ ಬಿತ್ತುವುದಿಲ್ಲ. ಮೋಡಗಳನ್ನು ಗಮನಿಸುತ್ತಿರುವವನು ಸಹ ಪೈರು ಕೊಯ್ಯುವುದಿಲ್ಲ.


ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.


ಅನಂತರ ಯೇಸು, “ದೇವರ ರಾಜ್ಯವು ಯಾವುದಕ್ಕೆ ಹೋಲಿಕೆಯಾಗಿದೆ? ನಾನು ಯಾವುದಕ್ಕೆ ಅದನ್ನು ಹೋಲಿಸಲಿ?


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು;


ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.


“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು,” ಎಂದು ಹೇಳಿದರು.


ರಾತ್ರಿ ಅವನು ಮಲಗಿದ್ದರೂ ಹಗಲು ಎದ್ದಿದ್ದರೂ ಆ ಬೀಜವು ಅವನಿಗೆ ತಿಳಿಯದ ರೀತಿಯಲ್ಲಿ ಅಂಕುರಿಸಿ ಬೆಳೆಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು