Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:31 - ಕನ್ನಡ ಸಮಕಾಲಿಕ ಅನುವಾದ

31 ಅದು ಭೂಮಿಯ ಎಲ್ಲಾ ಬೀಜಗಳಿಗಿಂತ ಅತಿ ಚಿಕ್ಕದಾದ ಸಾಸಿವೆ ಕಾಳಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆಕಾಳಿಗೂ ಅದನ್ನು ಹೋಲಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅದು ಸಾಸಿವೆ ಕಾಳಿನಂತಿರುತ್ತದೆ. ಭೂವಿುಯಲ್ಲಿ ಬಿತ್ತುವಾಗ ಅದು ಭೂವಿುಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರ ರಾಜ್ಯವು ಸಾಸಿವೆ ಕಾಳಿನಂತಿರುತ್ತದೆ. ನೀವು ಭೂಮಿಯಲ್ಲಿ ಬಿತ್ತುವ ಕಾಳುಗಳಲ್ಲಿ ಸಾಸಿವೆ ಕಾಳು ಅತ್ಯಂತ ಸಣ್ಣದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಹೆ, ಅಶೆ. ಎಕ್ ಮಾನುಸ್, ಎಕ್ ಸಾಸಾಂವಾಚಿ ಭ್ಹಿಂಯ್ ಘೆತಾ, ಜಗಾತ್ ಎಗ್ದಮ್ ಬಾರಿಕ್‍ ಭ್ಹಿಂಯ್ ತಿ, ತಿ ಭ್ಹಿಂಯ್, ತೊ ಜಮ್ನಿತ್ ಘಾಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:31
30 ತಿಳಿವುಗಳ ಹೋಲಿಕೆ  

ಹೀಗೆ ಕರ್ತ ಯೇಸುವಿನ ವಾಕ್ಯವು ವಿಸ್ತಾರವಾಗಿ ಹರಡುತ್ತಾ ಪ್ರಬಲವಾಯಿತು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.


ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು.


ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.


ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.


ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ಕನಿಷ್ಠನು ಸಾವಿರವಾಗುವನು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತ ಕಾಲದಲ್ಲಿ ಇದನ್ನು ಬಹು ಬೇಗನೆ ಉಂಟುಮಾಡುವೆನು.


ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.


ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಯೆಹೋವ ದೇವರ ಮುಂದೆ ಬೆಳೆಯುವನು. ಅವನಿಗೆ ಯಾವ ಸೌಂದರ್ಯವಾಗಲಿ ಇಲ್ಲವೆ ಘನತೆಯಾಗಲಿ ಇರಲಿಲ್ಲ. ನಾವು ಅವನನ್ನು ನೋಡಿದಾಗ, ಅವನಲ್ಲಿ ಆಕರ್ಷಿಸತಕ್ಕ ಯಾವ ಚಂದವು ಇರಲಿಲ್ಲ.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ?


ಅದನ್ನು ಬಿತ್ತಿದ ಮೇಲೆ, ಅದು ಬೆಳೆದು ತೋಟದ ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡ ರೆಂಬೆಗಳುಳ್ಳ ಮರವಾಗಿ ಬೆಳೆಯುತ್ತದೆ. ಆಕಾಶದ ಪಕ್ಷಿಗಳು ಬಂದು ಅದರ ನೆರಳಿನಲ್ಲಿ ಗೂಡು ಕಟ್ಟಿ ವಾಸಿಸುತ್ತವೆ,” ಎಂದು ಹೇಳಿದರು.


ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು