Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:38 - ಕನ್ನಡ ಸಮಕಾಲಿಕ ಅನುವಾದ

38 ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನು ದೋಣಿಯ ಹಿಂಭಾಗದಲ್ಲಿ ತಲೆಗಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ - ಗುರುವೇ, ನಾವು ಮುಳುಗಿಹೋಗುವದರಲ್ಲಿ ನಿನಗೆ ಚಿಂತೆಯಿಲ್ಲವೇ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿಹೋಗುತ್ತಿದ್ದೇವೆ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಖರೆ ಜೆಜು, ಢೊನಿತ್, ಫಾಟಿಕ್ಡೆ ಉಶ್ಯಾ ವರ್‍ತಿ ಟಕ್ಲೆ ಥವ್ನ್ ಘೆವ್ನ್ ನಿಜಲ್ಲೊ. ಶಿಸಾನಿ ತೆಕಾ ಉಟ್ವುಲ್ಯಾನಿ, ಅನಿ “ಗುರುಜಿ, ಅಮಿ ಮರುನ್ ಗೆಲ್ಲ್ಯಾರ್‍ಬಿ, ತುಕಾ ಕಾಯ್ ಪರ್ವಾ ನಾ ಕಾಯ್?” ಮನುನ್ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:38
22 ತಿಳಿವುಗಳ ಹೋಲಿಕೆ  

ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.


ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಕರ್ತನೇ, ಕಾಪಾಡು! ನಾವು ಮುಳುಗುತ್ತಿದ್ದೇವೆ!” ಎಂದರು.


ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಗುರುವೇ, ಗುರುವೇ, ನಾವು ಮುಳುಗುತ್ತಿದ್ದೇವೆ!” ಎಂದರು. ಆಗ ಯೇಸು ಎದ್ದು ಬಿರುಗಾಳಿಯನ್ನೂ ರಭಸವಾಗಿ ಬರುತ್ತಿದ್ದ ಅಲೆಗಳನ್ನೂ ಗದರಿಸಿದರು; ಆಗ ಬಿರುಗಾಳಿಯು ನಿಂತು ಹೋಗಿ, ಎಲ್ಲಾ ಪ್ರಶಾಂತವಾಯಿತು.


ಇವು ಹೀಗಿರಲಾಗಿ ಯೆಹೋವ ದೇವರೇ, ನೀವು ಹಿಂಜರಿಯುತ್ತೀರೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿರೋ?


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಅಲ್ಲಿ ಯಾಕೋಬನ ಬಾವಿ ಇತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡವರಾಗಿ ಆ ಬಾವಿಯ ಬಳಿಯಲ್ಲಿ ಕುಳಿತುಕೊಂಡರು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.


ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?


ನಾನು ಕರೆದು ಕೂಗಿದರೂ ಅವರು ನನ್ನ ಪ್ರಾರ್ಥನೆಯನ್ನು ಲಾಲಿಸುವುದಿಲ್ಲ.


ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.


ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು.


ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು