Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:41 - ಕನ್ನಡ ಸಮಕಾಲಿಕ ಅನುವಾದ

41 ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಈತನು ಯಾರಿರಬಹುದು? ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆನಿ ಲೈ ಭಿಂವ್ನ್ ಗೆಲ್ಲೆ, ಅನಿ ಎಕಾಮೆಕಾಕ್ “ಹ್ಯೊ ಮಾನುಸ್ ಕೊನ್? ವಾರೊ ಅನಿ ಲ್ಹಾಟಾಸೈತ್ ಹೆನಿ ಸಾಂಗಟಲ್ಲೆ ಅಯಿಕ್ತ್ಯಾತ್!”ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:41
17 ತಿಳಿವುಗಳ ಹೋಲಿಕೆ  

ಆಗ ಯೇಸು ತಮ್ಮ ಶಿಷ್ಯರಿಗೆ, “ನಿಮ್ಮ ನಂಬಿಕೆ ಎಲ್ಲಿ?” ಎಂದರು. ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು, “ಇವರು ಯಾರಿರಬಹುದು? ಗಾಳಿಗೂ ನೀರಿಗೂ ಸಹ ಅಪ್ಪಣೆ ಕೊಡುತ್ತಾರಲ್ಲಾ. ಅವು ಇವರು ಹೇಳಿದ ಹಾಗೆ ಕೇಳುತ್ತಾವಲ್ಲಾ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


‘ಇಲ್ಲಿಯ ತನಕ ಬರಬಹುದು, ಇದನ್ನು ಮೀರಿ ಬರಕೂಡದು; ಇಲ್ಲಿಗೇ ನಿನ್ನ ತೆರೆಗಳ ಹೆಮ್ಮೆ ನಿಲ್ಲಲಿ,’ ಎಂದು ಆಜ್ಞಾಪಿಸಿದೆನು.


ಆದರೆ ಶಿಷ್ಯರು ಆಶ್ಚರ್ಯದಿಂದ, “ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದರು.


ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.


ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ.


ಜನರೆಲ್ಲರೂ ಬೆರಗಾಗಿ, “ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಅವರು ದೋಣಿ ಹತ್ತಿದಾಗ, ಗಾಳಿ ನಿಂತುಹೋಯಿತು.


“ನಮ್ಮ ಒಡಂಬಡಿಕೆಯು ಜೀವದ ಹಾಗೂ ಶಾಂತಿಯ ಒಡಂಬಡಿಕೆಯಾಗಿತ್ತು. ಅವುಗಳನ್ನು ನಾನೇ ಅವನಿಗೆ ಕೊಟ್ಟೆನು. ಅವನು ನನಗೆ ಭಯಪಟ್ಟು, ನನ್ನ ಹೆಸರನ್ನು ಘನಪಡಿಸಿದನು.


ಜನರು ಅತ್ಯಂತ ಆಶ್ಚರ್ಯಪಟ್ಟು, “ಯೇಸು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ. ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರೆ,” ಎಂದುಕೊಳ್ಳುತ್ತಿದ್ದರು.


ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.


ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು