Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:2 - ಕನ್ನಡ ಸಮಕಾಲಿಕ ಅನುವಾದ

2 ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ದೋಣಿಯಿಂದ ಇಳಿದುಬಂದ ಕೂಡಲೆ ದೆವ್ವಹಿಡಿದವನೊಬ್ಬನು ಸಮಾಧಿಯ ಗವಿಗಳೊಳಗಿಂದ ಆತನೆದುರಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು ದೋಣಿಯಿಂದ ಹೊರಕ್ಕೆ ಬಂದಾಗ, ಒಬ್ಬ ಮನುಷ್ಯನು ಸಮಾಧಿಯ ಗವಿಗಳಿಂದ ಆತನ ಬಳಿಗೆ ಬಂದನು. ಅವನಿಗೆ ದೆವ್ವಹಿಡಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜು, ಢೊನಿತ್ನಾ ಉತ್ರುನ್ ಯೆಲ್ಲ್ಯಾ ತನ್ನಾ, ಎಕ್ ಮಾನುಸ್ ಮಸಂಕಿತ್ನಾ ಭಾಯ್ರ್ ಯೆಲೊ, ಅನಿ ಜೆಜುಕ್ ಭೆಟ್ಲೊ. ತ್ಯಾ ಮಾನ್ಸಾಚ್ಯಾ ಆಂಗಾತ್ ಗಿರೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:2
13 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಸಭಾಮಂದಿರದೊಳಗೆ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.


ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು.


ಸಮಾಧಿಗಳಲ್ಲಿ ಉಳಿದು, ಗವಿಗಳಲ್ಲಿ ತಂಗುವರು. ಹಂದಿಯ ಮಾಂಸವನ್ನು ತಿನ್ನುವರು ತಮ್ಮ ಪಾತ್ರೆಗಳಲ್ಲಿ ಅಶುದ್ಧ ಪದಾರ್ಥಗಳ ಸಾರನ್ನು ಇಟ್ಟುಕೊಂಡು,


ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು.


ಯೇಸು ದಡಕ್ಕೆ ಸೇರಿದಾಗ, ಬಹುಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆ ಯಾವ ಮನೆಯಲ್ಲಿ ಇರದೆ ಸಮಾಧಿಯ ಗುಹೆಗಳಲ್ಲಿ ವಾಸಿಸುತ್ತಿದ್ದ ಒಬ್ಬ ಮನುಷ್ಯನನ್ನು ಯೇಸು ಸಂಧಿಸಿದರು.


ಹೀಗೆ ಯೇಸುವಿನ ವಿಷಯ ತಿಳಿದ ಕೂಡಲೇ, ಅಶುದ್ಧಾತ್ಮಪೀಡಿತಳಾಗಿದ್ದ ಒಬ್ಬ ಚಿಕ್ಕ ಹುಡುಗಿಯ ತಾಯಿ ಬಂದು ಅವರ ಪಾದಕ್ಕೆ ಬಿದ್ದಳು.


ಯೇಸು ಮತ್ತೊಮ್ಮೆ ಗಲಿಲಾಯ ಸರೋವರದ ತೀರದಲ್ಲಿ ಬೋಧಿಸಲಾರಂಭಿಸಿದರು. ಜನರು ಗುಂಪುಗುಂಪಾಗಿ ಯೇಸುವಿನ ಸುತ್ತಲೂ ನೆರೆದು ಬಂದದ್ದರಿಂದ ಯೇಸು ಸರೋವರದಲ್ಲಿದ್ದ ದೋಣಿಯನ್ನು ಹತ್ತಿ ಕುಳಿತುಕೊಂಡರು. ಜನರು ದಡದಲ್ಲಿ ಸುತ್ತಲೂ ನಿಂತಿದ್ದರು.


“ಆತನಲ್ಲಿ ಅಶುದ್ಧಾತ್ಮವಿದೆ,” ಎಂದು ಅವರು ಹೇಳುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು.


ಅಶುದ್ಧಾತ್ಮವು ಅವನನ್ನು ಉಗ್ರವಾಗಿ ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂತು.


ಜನರ ಗುಂಪು ಹೆಚ್ಚಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು ತಮಗಾಗಿ ಒಂದು ಚಿಕ್ಕ ದೋಣಿಯನ್ನು ಸಿದ್ಧವಾಗಿಡಲು ತಮ್ಮ ಶಿಷ್ಯರಿಗೆ ಹೇಳಿದರು.


ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು.


ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ.


ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು