Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:7 - ಕನ್ನಡ ಸಮಕಾಲಿಕ ಅನುವಾದ

7 ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ, ನನ್ನನ್ನು ಕಾಡಬೇಡ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7-8 ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 “ಜೆಜು ಪರಮೊನ್ನತ್ ದೆವಾಚ್ಯಾ ಲೆಕಾ! ತಿಯಾ ಮಾಜ್ಯಾ ಖಬ್ರೆಕ್ ಕಶ್ಯಾಕ್ ಯೆಲೆ? ತಿಯಾ, ಮಾಕಾ ಶಿಕ್ಷಾ ದಿವ್‍ನಕೊ, ಮನುನ್ ದೆವಾಚ್ಯಾ ನಾಂವಾನ್, ಮಿಯಾ ತುಜ್ಯಾಕ್ಡೆ ಮಾಗ್ತಾ!” ಮನುನ್ ಬೊಬ್ ಮಾರುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:7
29 ತಿಳಿವುಗಳ ಹೋಲಿಕೆ  

ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು.


ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.


ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.


ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ ಹರ್ಷಗೊಳ್ಳಿರಿ. ಭೂಮಿಯೇ, ಸಮುದ್ರವೇ, ನಿಮಗೆ ದುರ್ಗತಿ! ಎನ್ನುತ್ತೇನೆ. ಏಕೆಂದರೆ, ಪಿಶಾಚನು ತನಗಿರುವ ಕಾಲವು ಕೊಂಚವೆಂದು ತಿಳಿದು, ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ,” ಎಂಬುದಾಗಿ ಹೇಳಿತು.


ಕೆಲವು ಯೆಹೂದ್ಯರು ದುರಾತ್ಮಗಳನ್ನು ಬಿಡಿಸಲು ಪ್ರಯತ್ನಿಸಿ, “ಪೌಲನು ಸಾರುತ್ತಿರುವ ಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಆಜ್ಞಾಪಿಸುತ್ತೇನೆ,” ಎಂದು ಅವರು ಕರ್ತ ಯೇಸುವಿನ ಹೆಸರನ್ನು ಬಳಸಲು ಪ್ರಯತ್ನಿಸಿದರು.


ಅವನು ಯೇಸುವನ್ನು ಕಂಡಾಗ, ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಮಹೋನ್ನತ ದೇವಪುತ್ರರೇ, ನನ್ನ ಗೊಡವೆ ನಿಮಗೆ ಏಕೆ? ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.


ದುರಾತ್ಮಗಳು ಯೇಸುವನ್ನು ಕಂಡಾಗಲೆಲ್ಲಾ ಅವರ ಮುಂದೆ ಬಿದ್ದು, “ನೀವು ದೇವರ ಪುತ್ರ,” ಎಂದು ಕಿರುಚಿದವು.


ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.


ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.


ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.


ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.


ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.


ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”


ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ರಾಜರನ್ನು ಸೋಲಿಸಿ, ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಸಂಧಿಸಿ ಅವನನ್ನು ಆಶೀರ್ವದಿಸಿದನು.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.


ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


“ನಜರೇತಿನ ಯೇಸುವೇ, ನಮ್ಮ ಗೊಡವೆ ನಿಮಗೆ ಏಕೆ? ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರಾ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರ ಪರಿಶುದ್ಧರು,” ಎಂದು ಹೇಳಿದನು.


ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು.


ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದರು. ತಿರುಗಿ ಮಹಾಯಾಜಕನು, “ನೀನು ಭಾಗ್ಯವಂತನ ದೇವರ ಪುತ್ರನಾಗಿರುವ ಕ್ರಿಸ್ತನೋ?” ಎಂದು ಯೇಸುವನ್ನು ಕೇಳಿದನು.


ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ,


ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು.


ದೇವರು ಒಬ್ಬರೇ ಎಂದು ನೀನು ನಂಬುತ್ತೀ, ಅದು ಒಳ್ಳೆಯದು, ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು