Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:21 - ಕನ್ನಡ ಸಮಕಾಲಿಕ ಅನುವಾದ

21 ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಒಳಗಿನಿಂದ ಅಂದರೆ ಮನುಷ್ಯರ ಮನಸ್ಸಿನೊಳಗಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಬ್ಬ ವ್ಯಕ್ತಿಯ ಅಂತರಂಗದಲ್ಲಿ ಈ ಕೆಟ್ಟ ಆಲೋಚನೆಗಳೆಲ್ಲವೂ ಆರಂಭವಾಗುತ್ತವೆ: ದುರಾಲೋಚನೆ, ಲೈಂಗಿಕಪಾಪ, ಕಳ್ಳತನ, ಕೊಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಎಕಾ ಮಾನ್ಸಾಚ್ಯಾ, ಕಾಳ್ಜಾತ್ ಹಿ ಸಗ್ಳಿ ಬುರ್ಶಿ ಕಾಮಾ ಉಪಾಜ್ತ್ಯಾತ್ ಅನಿ ತೆಕಾ ಬುರ್ಶಿ ಕಾಮಾ ಕರುಕ್ ಉತ್ತೆಜನ್ ಕರ್‍ತ್ಯಾತ್. ತಿ ಖಲಿ ಕಾಮಾ ಮಟ್ಲ್ಯಾರ್, ಬುರ್ಶಿ ಯೆವ್ಜನ್ಯಾ, ರಾಂಡ್ಗೆಪಾನ್, ಚೊರಿ ಕರ್‍ತಲೆ, ಜಿವಾನಿ ಮಾರ್‍ತಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:21
37 ತಿಳಿವುಗಳ ಹೋಲಿಕೆ  

ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?


ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.


ಈ ದುಷ್ಟತನಕ್ಕಾಗಿ ಪಶ್ಚಾತ್ತಾಪಪಟ್ಟು ಕರ್ತ ಯೇಸುವನ್ನು ಬೇಡಿಕೋ, ಒಂದು ವೇಳೆ ಅವರು ನಿನ್ನ ಹೃದಯದಲ್ಲಿದ್ದ ಈ ವಿಚಾರವನ್ನು ಕ್ಷಮಿಸಬಹುದು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಆ ದಿನದಲ್ಲಿ ನಿನ್ನ ಮನಸ್ಸಿಗೆ ಕೆಲವು ಆಲೋಚನೆಗಳು ಬರುವುವು ಮತ್ತು ನೀನು ಒಂದು ಕುತಂತ್ರವನ್ನು ಮಾಡುವೆ.


ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ?


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ನೀವು ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿಗಳಾಗಿರುತ್ತೀರಲ್ಲವೇ?


ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.


ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.


ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.


ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ. ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದರು.


ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ.


ಆದರೆ ಪಾಪವು, ಆ ಆಜ್ಞೆಯಿಂದ ಅನುಕೂಲ ಹೊಂದಿ ನನ್ನಲ್ಲಿ ಎಲ್ಲಾ ವಿಧದ ಆಶೆಗಳನ್ನು ಉಂಟುಮಾಡಿತು. ಏಕೆಂದರೆ ನಿಯಮವಿಲ್ಲದೆ ಪಾಪವು ಸತ್ತದ್ದಾಗಿರುತ್ತದೆ.


ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು.


ಯೆಹೋವ ದೇವರು ಗರ್ವಿಷ್ಠರ ಮನೆಯನ್ನು ಕೆಡವಿಬಿಡುವರು, ಆದರೆ ವಿಧವೆಯರ ಮೇರೆಯನ್ನು ಅವರು ನೆಲೆಗೊಳಿಸುವರು.


“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ.


ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ?


ಅಶುದ್ಧತೆಯಿಂದ ಶುದ್ಧವಾದದ್ದನ್ನು ತರುವವನು ಯಾರು? ಯಾರೂ ತರಲಾರರು!


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.


ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.


“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ಸ್ವಾರ್ಥದ ಲಾಭಗಳ ಕಡೆಗಲ್ಲ, ಆದರೆ ನಿಮ್ಮ ಶಾಸನಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸಿರಿ.


ದ್ರೋಹಮಾಡಿದ್ದೇವೆ, ಯೆಹೋವ ದೇವರಿಗೆ ಸುಳ್ಳಾಡಿದ್ದೇವೆ. ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ. ಬಲಾತ್ಕಾರದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತನಾಡಿದ್ದೇವೆ. ಸುಳ್ಳು ಮಾತುಗಳಿಂದ ಬಸುರಾಗಿ ಅವುಗಳನ್ನು ಹೃದಯದಿಂದ ನುಡಿದಿದ್ದೇವೆ.


ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.


ಯೇಸು ಮುಂದುವರಿದು, “ಆದರೆ ಮನುಷ್ಯನೊಳಗಿಂದ ಹೊರಡುವಂಥದ್ದು ಅವನನ್ನು ಅಶುದ್ಧ ಮಾಡುತ್ತವೆ.


ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ.


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು