Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:7 - ಕನ್ನಡ ಸಮಕಾಲಿಕ ಅನುವಾದ

7 ಮನುಷ್ಯರ ಆಜ್ಞೆಗಳನ್ನೇ ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಬೋಧಿಸುವದರಿಂದ ನನಗೆ ಭಕ್ತಿತೋರಿಸುವದು ವ್ಯರ್ಥ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇವರು ನನ್ನನ್ನು ಆರಾಧಿಸುವುದು ಕೇವಲ ವ್ಯರ್ಥ. ಏಕೆಂದರೆ ಮಾನವ ನಿಯಮಗಳನ್ನೇ ಇವರು ಬೋಧಿಸುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹಿ ಮಾನ್ಸಾ ಮಾಜಿ ಭಜನ್ ಕರುನ್ ಕಾಯ್ ಫಾಯ್ದೊ, ಕಶ್ಯಾಕ್ ಮಟ್ಲ್ಯಾರ್ ದೆವಾಚೆ ಖಾಯ್ದೆ ಸೊಡುನ್ ಮಾನ್ಸಾನಿ ಕರಲ್ಲೆ ಖಾಯ್ದೆ ಹೆನಿ ಸಗ್ಳ್ಯಾಕ್ನಿ ಶಿಕ್ವುತ್ಯಾತ್.ಮನುನ್ ಸಾಂಗಲ್ಲೆ ಖರೆ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:7
15 ತಿಳಿವುಗಳ ಹೋಲಿಕೆ  

ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಅವರು ಮನುಷ್ಯರ ಆಜ್ಞೆಗಳನ್ನು ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ಆರಾಧಿಸುವುದು ವ್ಯರ್ಥ.’”


ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.


ಈ ಶಾಸನಗಳು ಮಾನವ ಆಜ್ಞೆಗಳ ಹಾಗೂ ಬೋಧನೆಗಳ ಅನುಸಾರವಾಗಿ ಬಳಕೆಯಿಂದ ಅಳಿದುಹೋಗುತ್ತವೆ!


ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.


ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.


ಈ ಗ್ರಂಥದ ಪ್ರವಾದನೆಯನ್ನು ಕೇಳುವ ಪ್ರತಿಯೊಬ್ಬರಿಗೂ ನಾನು ಸಾಕ್ಷಿ ಕೊಡುವುದೇನೆಂದರೆ: ಯಾರಾದರೂ ಹೆಚ್ಚು ಮಾತುಗಳನ್ನು ಇವುಗಳಿಗೆ ಕೂಡಿಸಿದರೆ, ದೇವರು ಅವರ ಮೇಲೆ ಈ ಗ್ರಂಥದಲ್ಲಿ ಬರೆದಿರುವ ಉಪದ್ರವಗಳನ್ನು ಕೂಡಿಸುವರು.


ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ.


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ಮೂರ್ಖನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಪ್ರಮಾಣಗಳು ಬೇಕೋ?


“ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,


ಕ್ರಿಸ್ತ ಯೇಸು ಎದ್ದು ಬರಲಿಲ್ಲವಾದರೆ, ನಮ್ಮ ಪ್ರಸಂಗವೂ ನಿಮ್ಮ ವಿಶ್ವಾಸವೂ ನಿಷ್ಪ್ರಯೋಜನವಾದದ್ದು.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು