Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:9 - ಕನ್ನಡ ಸಮಕಾಲಿಕ ಅನುವಾದ

9 ಯೇಸು ಇನ್ನೂ ಅವರಿಗೆ, “ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಇನ್ನೂ ಅವರಿಗೆ - ನೀವು ನಿಮ್ಮ ಸಂಪ್ರದಾಯವನ್ನು ಹಿಡಿದು ನಡಿಸುವದಕ್ಕಾಗಿ ದೇವರ ಆಜ್ಞೆಯನ್ನು ವ್ಯರ್ಥಮಾಡುತ್ತೀರಿ; ಬಹು ಚೆನ್ನಾಗಿದೆಯಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಂತರ ಯೇಸು ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದಕ್ಕಾಗಿ ದೇವರ ಆಜ್ಞೆಗಳನ್ನು ತಿರಸ್ಕರಿಸುವುದರಲ್ಲಿ ನಿಪುಣರಾಗಿದ್ದೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ಫಿಡೆ ಬೊಲುನ್ಗೆತ್ ಜೆಜುನ್ “ತುಮಿ ತುಮ್ಚೆ ಖಾಯ್ದೆ ಪಾಳು ಸಾಟ್ನಿ ದೆವಾಚೆ ಖಾಯ್ದೆ ತಿರಸ್ಕಾರ್ ಕರ್‍ತಲ್ಯಾತ್ ಉಶಾರ್ ಹಾಸಿ!”ಮಟ್ಲ್ಯಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:9
16 ತಿಳಿವುಗಳ ಹೋಲಿಕೆ  

ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಹೀಗೆ ನೀವು ಮಾಡುತ್ತಾ ಬಂದಿರುವ ಸಂಪ್ರದಾಯಗಳ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ. ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ,” ಎಂದು ಹೇಳಿದರು.


ಫರಿಸಾಯರು ಮತ್ತು ಎಲ್ಲಾ ಯೆಹೂದ್ಯರು ಆಚಾರ ಪದ್ಧತಿಯಂತೆ ತಮ್ಮ ಕೈಗಳನ್ನು ಸ್ವಚ್ಛವಾಗಿ ತೊಳೆಯದೆ ಊಟಮಾಡುವುದಿಲ್ಲ. ಹೀಗೆ ಅವರ ಪೂರ್ವಿಕರಿಂದ ಬಂದ ಸಂಪ್ರದಾಯವನ್ನು ಪಾಲಿಸುತ್ತಿದ್ದರು.


ಯೆಹೋವ ದೇವರೇ, ಇದು ನೀವು ಕಾರ್ಯಸಾಧಿಸಲು ಸಮಯವಾಗಿದೆ, ಏಕೆಂದರೆ ನಿಮ್ಮ ನಿಯಮವು ಉಲ್ಲಂಘಿಸಲಾಗಿದೆ.


ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ಹಾಗಾದರೆ, ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. ಹಾಗಾದರೆ, ನಾವು ನಂಬಿಕೆಯ ಮೂಲಕ ನಿಯಮವನ್ನು ನಿರರ್ಥಕಗೊಳಿಸುತ್ತೇವೋ? ಎಂದಿಗೂ ಇಲ್ಲ. ನಾವು ನಿಯಮವನ್ನು ಸ್ಥಿರಪಡಿಸುತ್ತೇವಷ್ಟೇ.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.


ಆದ್ದರಿಂದ ಫರಿಸಾಯರು ಮತ್ತು ನಿಯಮ ಬೋಧಕರು, “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯದ ಪ್ರಕಾರ ಏಕೆ ನಡೆಯುವುದಿಲ್ಲ? ಅವರು ಮೈಲಿಗೆಯಾದ ಕೈಗಳಿಂದ ಊಟಮಾಡುತ್ತಾರಲ್ಲಾ?” ಎಂದು ಯೇಸುವನ್ನು ಕೇಳಿದರು.


ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು