Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:12 - ಕನ್ನಡ ಸಮಕಾಲಿಕ ಅನುವಾದ

12 ಯೇಸು ತಮ್ಮ ಆತ್ಮದಲ್ಲಿ ನೊಂದುಕೊಂಡು, “ಈ ಸಂತತಿಯು ಸೂಚಕಕಾರ್ಯವನ್ನು ಹುಡುಕುವುದು ಏಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲಾಗುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವದು ಯಾಕೆ? ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಸೂಚಕಕಾರ್ಯವು ಸಿಕ್ಕುವದೇ ಇಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜು ಉಸ್ಕಾರ್ಲೊ ಅನಿ “ಹ್ಯಾ ಕಾಲಾಚಿ ಲೊಕಾ ವಳಕ್ ಕಶ್ಯಾಕ್ ಇಚಾರ್‍ತ್ಯಾತ್? ಮಿಯಾ ಖರೆಚ್ ಸಾಂಗ್ತಾ ಹ್ಯಾ ಲೊಕಾಕ್ನಿ ಘುರುತ್ ಕರುನ್ ದಾಕ್ವುಕ್ ಹೊಯ್ನಾ,” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:12
15 ತಿಳಿವುಗಳ ಹೋಲಿಕೆ  

ಯೇಸು ಸ್ವರ್ಗದ ಕಡೆಗೆ ನೋಡಿ, ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ “ಎಪ್ಫಥಾ!” ಎಂದರು. “ತೆರೆಯಲಿ!” ಎಂಬುದು ಅದರ ಅರಮೀಯ ಅರ್ಥ.


ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.


ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು,


ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ಯೇಸು ಅವರ ಅಪನಂಬಿಕೆಯನ್ನು ಕಂಡು ಆಶ್ಚರ್ಯಪಟ್ಟರು. ಆಮೇಲೆ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದರು.


ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.


ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.


ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು.


ಯೇಸು ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೆದಡಕ್ಕೆ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು