Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:21 - ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವರಿಗೆ, “ಹಾಗಾದರೆ ನೀವು ಇನ್ನೂ ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಯೇಸು, “ಇಷ್ಟಾದರೂ, ನಿಮಗಿನ್ನೂ ತಿಳುವಳಿಕೆ ಇಲ್ಲವೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಆತನು ಅವರಿಗೆ - ನಿಮಗೆ ಇನ್ನೂ ತಿಳುವಳಿಕೆ ಬರಲಿಲ್ಲವೇ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಯೇಸು ಅವರಿಗೆ, “ನಾನು ಮಾಡಿದ ಈ ಕಾರ್ಯಗಳನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡಿದ್ದೀರಿ, ಆದರೆ ನೀವಿನ್ನೂ ಅರ್ಥಮಾಡಿಕೊಳ್ಳುವುದಿಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಜೆಜುನ್ “ಅನಿ ಅಜುನ್ಬಿ ತುಮ್ಕಾ ಕಳಿನಾ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:21
10 ತಿಳಿವುಗಳ ಹೋಲಿಕೆ  

ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿಲ್ಲವಾದ್ದರಿಂದ ಆಶ್ಚರ್ಯಚಕಿತರಾದರು. ಏಕೆಂದರೆ ಅವರ ಹೃದಯ ಕಠಿಣವಾಗಿತ್ತು.


ಯೇಸು ತಮ್ಮ ಆತ್ಮದಲ್ಲಿ ನೊಂದುಕೊಂಡು, “ಈ ಸಂತತಿಯು ಸೂಚಕಕಾರ್ಯವನ್ನು ಹುಡುಕುವುದು ಏಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲಾಗುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.


ಸ್ವಸ್ಥಚಿತ್ತರಾಗಿರಿ, ಪಾಪಮಾಡುವುದನ್ನು ನಿಲ್ಲಿಸಿರಿ. ಕೆಲವರಂತೂ ದೇವರನ್ನೇ ಅಲಕ್ಷ್ಯಮಾಡುವವರಾಗಿದ್ದಾರೆ. ನಿಮಗೆ ನಾಚಿಕೆಯಾಗಬೇಕೆಂದು ನಾನು ಇದನ್ನು ಹೇಳುತ್ತೇನೆ.


ನಿಮ್ಮಲ್ಲಿ ನಾಚಿಕೆ ಹುಟ್ಟಿಸುವುದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರನ ನ್ಯಾಯವನ್ನು ವಿವೇಚಿಸಿ ತೀರ್ಮಾನ ಕೊಡುವ ಜ್ಞಾನಿಯು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?


ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟುಕಾಲ ನಿಮ್ಮೊಂದಿಗೆ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ಹಾಗಾದರೆ, ‘ತಂದೆಯನ್ನು ನಮಗೆ ತೋರಿಸಿರಿ’ ಎಂದು ನೀನು ಕೇಳುವುದು ಹೇಗೆ?


ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಏಕೆ ಚರ್ಚಿಸಿಕೊಳ್ಳುತ್ತೀರಿ? ನೀವು ಇನ್ನೂ ಕಾಣದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣ ಮಾಡಿಕೊಂಡಿದ್ದೀರೋ?


ಜನರಲ್ಲಿ ಬುದ್ಧಿಹೀನರೇ, ನೀವು ಗ್ರಹಿಸಿರಿ. ಮೂರ್ಖರೇ, ಯಾವಾಗ ಬುದ್ಧಿವಂತರಾಗುವಿರಿ?


ಯೇಸು ಬೇತ್ಸಾಯಿದಕ್ಕೆ ಬಂದಾಗ, ಕೆಲವರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು