Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:31 - ಕನ್ನಡ ಸಮಕಾಲಿಕ ಅನುವಾದ

31 ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚುಮರೆಯಿಲ್ಲದೆ ಬೋಧಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇದಲ್ಲದೆ ಆತನು - ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತವಾಗಿ ಕೊಲ್ಲಲ್ಪಟ್ಟು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವದಕ್ಕೆ ಪ್ರಾರಂಭಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಜೆಜುನ್ ಅಪ್ಲ್ಯಾ ಶಿಸಾಕ್ನಿ "ಮಾನ್ಸಾಚ್ಯಾ ಲೆಕಾಕ್ ಕಸ್ಟ್ ಸೊಸುಕುಚ್ ಪಾಜೆ, ಜಾನ್ತ್ಯಾ ಲೊಕಾನಿ, ಮೊಟ್ಯಾ ಯಾಜಕಾನಿ ಅನಿ ಶಾಸ್ತರಾ ಶಿಕ್ವುತಲ್ಯಾನಿ ತೆಕಾ ತಿರಸ್ಕಾರ್ ಕರುಕುಚ್ ಪಾಜೆ. ಅನಿ ತೊ ಮರುಕ್ ಪಾಜೆ, ಖರೆ, ತೊ ತಿನ್ವ್ಯಾ ದಿಸಿ ಮರಲ್ಲ್ಯಾತ್ನಾ ಝಿತ್ತೊ ಹೊವ್ನ್ ಉಟುನ್ ಯೆತಾ."ಮನುನ್ ಸಾಂಗುಕ್ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:31
27 ತಿಳಿವುಗಳ ಹೋಲಿಕೆ  

“ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.


ಅದಕ್ಕೆ ಯೇಸು ಅವರಿಗೆ, “ಈ ದೇವಾಲಯವನ್ನು ಕೆಡವಿರಿ. ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.


ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,


ಆದರೆ ನಾನು ಮೊದಲು ಅನೇಕ ಕಷ್ಟಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕಾರ ಹೊಂದುವುದು ಅಗತ್ಯವಾಗಿದೆ.


ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.


ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.


ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.


ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.


ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಅವರಿಗೆ, ‘ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು,’ ಎಂದು ಹೇಳಿದಿರಿ. ಆದ್ದರಿಂದ ಈಗ ಯೆಹೋವ ದೇವರ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ, ನಿಮ್ಮ ಕುಲಗಳ ಪ್ರಕಾರವಾಗಿಯೂ ಬನ್ನಿರಿ,” ಎಂದನು.


ಆಗ ಯೆಹೋವ ದೇವರು ಸಮುಯೇಲನಿಗೆ, “ಜನರು ನಿನಗೆ ಹೇಳಿದ್ದೆಲ್ಲದರಲ್ಲಿ ಅವರ ಮಾತು ಕೇಳು. ಏಕೆಂದರೆ ಅವರು ನಿನ್ನನ್ನು ತಿರಸ್ಕಾರ ಮಾಡಿಲ್ಲ. ನಾನು ಅವರನ್ನು ಆಳದ ಹಾಗೆ ನನ್ನನ್ನೇ ತಿರಸ್ಕಾರಮಾಡಿದ್ದಾರೆ.


ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.


“ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು