Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:38 - ಕನ್ನಡ ಸಮಕಾಲಿಕ ಅನುವಾದ

38 ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಸಂತತಿಯಲ್ಲಿ ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ ನಾಚಿಕೊಳ್ಳುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಹ್ಯಾ ಬುರ್ಶ್ಯಾ ಅನಿ ಪಾಪಿ ದಿಸಾತ್ನಿ, ಕೊನ್ ತರ್ ಎಕ್ಲೊ ಮಾನುಸ್ ಮಿಯಾ ಸಾಂಗಲ್ಲ್ಯಾ ಬರ್‍ಯಾ ಗೊಸ್ಟಿಯಾಂಚ್ಯಾಸಾಟಿ ನಾಜಾಲ್ಯಾರ್ ಮಾಜೆಸಾಟಿ ಲಜ್ತಾ ಹೊಲ್ಯಾರ್ ಮಾನ್ಸಾಚೊ ಲೆಕ್ ಅಪ್ನಾಚ್ಯಾ ಬಾಬಾಚ್ಯಾ ಮಹಿಮೆನ್ ದೆವಾಚ್ಯಾ ದುತಾಂಚ್ಯಾ ವಾಂಗ್ಡಾ ಯೆಲ್ಲ್ಯಾ ತನ್ನಾ ತೆಚೆಸಾಟ್ನಿ ಲಜ್ತಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:38
44 ತಿಳಿವುಗಳ ಹೋಲಿಕೆ  

ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.


ಮಗನನ್ನು ಅಲ್ಲಗಳೆಯುವವನು ತಂದೆಯನ್ನೂ ಅಲ್ಲಗಳೆಯುತ್ತಾನೆ. ಮಗನನ್ನು ಅಂಗೀಕರಿಸುವವನು ತಂದೆಯನ್ನೂ ಅಂಗೀಕರಿಸುತ್ತಾನೆ.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


ಈಜಿಪ್ಟಿನ ನಿಕ್ಷೇಪಕ್ಕಿಂತಲೂ ಕ್ರಿಸ್ತ ಯೇಸುವಿಗಾಗಿ ನಿಂದೆಯನ್ನು ಹೊಂದುವುದು ಮಹಾಐಶ್ವರ್ಯವೆಂದೆಣಿಸಿಕೊಂಡನು. ಏಕೆಂದರೆ ಅವನು ತನ್ನ ಬಹುಮಾನಕ್ಕಾಗಿ ಎದುರು ನೋಡಿದನು.


ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ.


ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.


“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.


“ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.


“ಆಗ ಯಜಮಾನನು, ‘ಇದ್ದ ಪ್ರತಿಯೊಬ್ಬರಿಗೆ ಕೊಡಲಾಗುವುದು ಮತ್ತು ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ಕಸಿದುಕೊಳ್ಳಲಾಗುವುದು.


ಮನುಷ್ಯಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಪಾಪಕ್ಕೆ ಆತಂಕವಾದ ಎಲ್ಲವನ್ನೂ, ಕೇಡುಮಾಡುವ ಎಲ್ಲರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ,


“ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.


ಒನೇಸಿಫೊರನ ಮನೆಯವರಿಗೆ ಕರ್ತ ಯೇಸು ಕರುಣೆಯನ್ನು ದಯಪಾಲಿಸಲಿ. ಏಕೆಂದರೆ ಅವನು ಅನೇಕಾವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆ ಪಡಲಿಲ್ಲ.


ನನಗಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಹೆಚ್ಚಳ ಪಡುವುದು ಬೇಡವೇ ಬೇಡ. ಅವರ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.


ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.


ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು.


ನಾನು ಮನುಷ್ಯಪುತ್ರನಾಗಿರುವುದರಿಂದ ನ್ಯಾಯತೀರಿಸುವ ಅಧಿಕಾರವನ್ನು ತಂದೆ ನನಗೆ ಕೊಟ್ಟಿದ್ದಾರೆ.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.


ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.


ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.


ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.


“ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.


ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


“ಆಗ ಮನುಷ್ಯಪುತ್ರನಾದ ನಾನು ಬಹು ಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ಕಾಣುವರು.


ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.


ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ?


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು