Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:2 - ಕನ್ನಡ ಸಮಕಾಲಿಕ ಅನುವಾದ

2 ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಯೇಸು ರೂಪಾಂತರ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆರು ದಿವಸಗಳಾದ ಮೇಲೆ ಯೇಸು ಪೇತ್ರ ಯಾಕೋಬ ಯೋಹಾನರನ್ನು ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆರು ದಿನಗಳ ನಂತರ ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಸಾ ದಿಸ್ ಹೊಲ್ಲ್ಯಾ ಮಾನಾ, ಜೆಜು ಪೆದ್ರುಕ್, ಜಾಕೊಬಾಕ್ ಅನಿ ಜುವಾಂವಾಕ್ ಬಲ್ವುನ್ ಘೆವ್ನ್, ಎಕ್ ಮಡ್ಡಿ ವರ್‍ತಿ ಗೆಲೊ. ಥೈ ತೆನಿ ಎವ್ಡೆಚ್ ಹೊತ್ತೆ. ತೆನಿ ಜೆಜು ವರ್‍ತಿ ನದರ್ ಮಾರುನ್ ಬಗಟಲ್ಲ್ಯಾನಿ ತನ್ನಾ ತೆಚೆ ವರ್‍ತಿ ಹೊಲ್ಲಿ ಬದ್ಲಾವನ್ ತೆಂಕಾ ದಿಸ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:2
23 ತಿಳಿವುಗಳ ಹೋಲಿಕೆ  

ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವುವು. ಅತಿವಿಸ್ತಾರವಾದ ದೇಶವನ್ನು ಕಣ್ಣು ತುಂಬಾ ನೋಡುವಿರಿ.


ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ.


ಯೇಸು ಪೇತ್ರ, ಯಾಕೋಬ, ಯೋಹಾನರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ, ಬಹು ಬೆರಗಾಗಿ ವ್ಯಥೆಗೊಳ್ಳಲಾರಂಭಿಸಿ,


ಆಗ ಮೋಶೆಯೂ ಅವನ ಸಹಾಯಕನಾದ ಯೆಹೋಶುವನೂ ದೇವರ ಬೆಟ್ಟದ ಮೇಲೆ ಹೊರಟರು.


ನಾನು ನಿಮ್ಮ ಬಳಿಗೆ ಬರುವುದು ಇದು ಮೂರನೆಯ ಸಾರಿ. “ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು,” ಎಂದು ಬರೆಯಲಾಗಿದೆ.


ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಯೆಹೋವ ದೇವರ ಮುಂದೆ ಬೆಳೆಯುವನು. ಅವನಿಗೆ ಯಾವ ಸೌಂದರ್ಯವಾಗಲಿ ಇಲ್ಲವೆ ಘನತೆಯಾಗಲಿ ಇರಲಿಲ್ಲ. ನಾವು ಅವನನ್ನು ನೋಡಿದಾಗ, ಅವನಲ್ಲಿ ಆಕರ್ಷಿಸತಕ್ಕ ಯಾವ ಚಂದವು ಇರಲಿಲ್ಲ.


ಅಹಾಬನು ತಿಂದು, ಕುಡಿಯುವುದಕ್ಕೆ ಹೋದನು. ಎಲೀಯನು ಕರ್ಮೆಲಿನ ಶಿಖರವನ್ನು ಏರಿ, ನೆಲದ ಮೇಲೆ ಬಿದ್ದು, ತನ್ನ ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.


ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಯೇಸು ಅವರಿಗೆ ಬೇರೊಂದು ರೀತಿಯಲ್ಲಿ ಕಾಣಿಸಿಕೊಂಡರು.


ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.


ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಆ ದಿನಗಳಲ್ಲಿ ಯೇಸು ಪ್ರಾರ್ಥಿಸುವುದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ, ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದರು.


ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು.


ತರುವಾಯ ಅವನು ಕಟ್ಟಿಗೆಗಳನ್ನು ಪೀಠದ ಮೇಲೆ ಇಟ್ಟು, ಹೋರಿಯನ್ನು ತುಂಡುತುಂಡಾಗಿ ಕಡಿದು, ಕಟ್ಟಿಗೆಗಳ ಮೇಲೆ ಇಟ್ಟು, “ನೀವು ನಾಲ್ಕು ಕೊಡ ನೀರು ತುಂಬಿಕೊಂಡು ದಹನಬಲಿಯ ಮೇಲೆಯೂ, ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು