Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:22 - ಕನ್ನಡ ಸಮಕಾಲಿಕ ಅನುವಾದ

22 ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತಮ್ಮಿಂದ ಏನಾದರೂ ಸಾಧ್ಯವಾದರೆ, ನಮ್ಮ ಮೇಲೆ ದಯವಿಟ್ಟು ಸಹಾಯಮಾಡಿ,” ಎಂದು ಯೇಸುವನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಇವನನ್ನು ಕೊಲ್ಲಬೇಕೆಂದು ಆಗಾಗ್ಗೆ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯಮಾಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 “ಲೈಂದಾ ತ್ಯಾ ಗಿರ್‍ಯಾನ್ ತೆಚೊ ಜಿವ್ ಕಾಡುಸಾಟಿ ಮನುನ್ ಆಗಿತ್, ಪಾನಿಯಾತ್ ನ್ಹೆವ್ನ್ ಪಾಡ್ವುಕ್ ಕಸ್‍ರತ್ ಕರಲ್ಲೆ ಹಾಯ್, ದಯಾ ಕರುನ್ ತುಕಾ ಸಾದ್ಯ್ ಹೊಲ್ಯಾರ್ ಅಮ್ಕಾ ಮಜತ್ ಕರ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:22
12 ತಿಳಿವುಗಳ ಹೋಲಿಕೆ  

ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.


ಯೇಸು ಅದಕ್ಕೊಪ್ಪದೆ ಅವನಿಗೆ, “ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು,” ಎಂದರು.


ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದರು. ಕೂಡಲೇ ಅವರ ಕಣ್ಣುಗಳು ದೃಷ್ಟಿಯನ್ನು ಪಡೆದವು. ಅವರೂ ಯೇಸುವನ್ನು ಹಿಂಬಾಲಿಸಿದರು.


ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.


ಯೇಸು ಮನೆಗೆ ಬಂದಾಗ, ಆ ಕುರುಡರು ಅವರ ಬಳಿಗೆ ಬಂದರು. ಆಗ ಯೇಸು ಅವರಿಗೆ, “ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ?” ಎಂದು ಕೇಳಿದರು. ಅದಕ್ಕವರು ಯೇಸುವಿಗೆ, “ಹೌದು ಕರ್ತನೆ,” ಎಂದರು.


ಅಲ್ಲಿಗೆ ಕುಷ್ಠರೋಗಿಯಾಗಿದ್ದ ಒಬ್ಬನು ಬಂದು, ಯೇಸುವಿನ ಮುಂದೆ ಮೊಣಕಾಲೂರಿ, “ಕರ್ತನೇ, ನೀವು ಮನಸ್ಸು ಮಾಡಿದರೆ, ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದನು.


“ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು. ಏಕೆಂದರೆ ಅವನು ಮೂರ್ಛಾರೋಗದಿಂದ ಬಹಳವಾಗಿ ಕಷ್ಟಪಡುತ್ತಾನೆ. ಅನೇಕ ಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.


ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.


ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು