Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:23 - ಕನ್ನಡ ಸಮಕಾಲಿಕ ಅನುವಾದ

23 ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದಕ್ಕೆ ಯೇಸು, “‘ನಿನಗೆ ಸಾಧ್ಯವಿರುವುದಾದರೆ’ ಎಂದು ನೀನು ಹೇಳುವುದೇಕೆ? ನಂಬಿಕೆಯಿಡುವ ವ್ಯಕ್ತಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಜೆಜುನ್ “ತುಕಾ ಸಾದ್ಯ್ ಹೊಲ್ಯಾರ್! ವಿಶ್ವಾಸ್ ಹೊತ್ತ್ಯಾ ಮಾನ್ಸಾಕ್ ಸಗ್ಳೆ ಸಾದ್ಯ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:23
12 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.


ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.


ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು.


ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು.


ಪೌಲನು ಮಾತನಾಡುತ್ತಿರುವುದನ್ನು ಅವನು ಆಲಿಸುತ್ತಿದ್ದನು. ಪೌಲನು ನೇರವಾಗಿ ಅವನನ್ನೇ ದೃಷ್ಟಿಸಿ ನೋಡಿ, ತಾನು ಗುಣಹೊಂದಲು ಅವನಲ್ಲಿ ವಿಶ್ವಾಸವಿದೆಯೆಂದು ಕಂಡು,


ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು.


ತಕ್ಷಣವೇ ಬಾಲಕನ ತಂದೆಯು, “ನಾನು ನಂಬುತ್ತೇನೆ. ನನಗೆ ಅಪನಂಬಿಕೆಯಿದೆ ನನಗೆ ಸಹಾಯಮಾಡು,” ಎಂದು ಮೊರೆಯಿಟ್ಟನು.


ಅದಕ್ಕೆ ಯೇಸು, “ಬಾ,” ಎಂದರು. ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು