Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:26 - ಕನ್ನಡ ಸಮಕಾಲಿಕ ಅನುವಾದ

26 ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ದೆವ್ವವು ಚೀರುತ್ತಾ, ಹುಡುಗನನ್ನು ವಿಲವಿಲನೆ ಒದ್ದಾಡಿಸಿ, ಕೊನೆಗೆ ಬಿಟ್ಟುಹೋಯಿತು. ಹುಡುಗನು ಶವದಂತಾದನು. ಅಲ್ಲಿದ್ದವರಲ್ಲಿ ಅನೇಕರು ‘ಹುಡುಗ ಸತ್ತುಹೋದ,’ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಅದು ಅಬ್ಬರಿಸಿ ಅವನನ್ನು ಒದ್ದಾಡಿಸಿ ಬಿಟ್ಟು ಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು - ಸತ್ತುಹೋದ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ದೆವ್ವವು ಅರಚಿತು. ಅದು ಆ ಹುಡುಗನನ್ನು ಮತ್ತೆ ನೆಲದ ಮೇಲೆ ಬೀಳಿಸಿ, ಒದ್ದಾಡಿಸಿ ಹೊರಬಂದಿತು. ಆ ಹುಡುಗನು ಸತ್ತವನಂತೆ ಬಿದ್ದಿದ್ದನು. ಅನೇಕ ಜನರು, “ಅವನು ಸತ್ತುಹೋದನು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತ್ಯಾ ಗಿರ್‍ಯಾನ್ ಜೊರಾನಿ ಬೊಬ್ ಮಾರ್‍ಲ್ಯಾನ್ ಅನಿ ತ್ಯಾ ಝಿಲ್ಗ್ಯಾಕ್ ಜಿಮ್ನಿಕ್ ಪಾಡ್ವುನ್, ತಳ್ಮಳಿಸರ್ಕೆ ಕರ್‍ಲ್ಯಾನ್ ಅನಿ ತೆಚಾತ್ನಾ ಭಾಯ್ರ್ ಗೆಲೊ, ತೊ ಝಿಲ್ಗೊ ಹಾಲಿನಸ್ತಾನಾ ಪಡ್ಲೊ. ತನ್ನಾ ಸಗ್ಳ್ಯಾನಿ ತೊ ಮರ್‍ಲೊಚ್ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:26
8 ತಿಳಿವುಗಳ ಹೋಲಿಕೆ  

ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.


ಅಶುದ್ಧಾತ್ಮವು ಅವನನ್ನು ಉಗ್ರವಾಗಿ ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂತು.


ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ ಹರ್ಷಗೊಳ್ಳಿರಿ. ಭೂಮಿಯೇ, ಸಮುದ್ರವೇ, ನಿಮಗೆ ದುರ್ಗತಿ! ಎನ್ನುತ್ತೇನೆ. ಏಕೆಂದರೆ, ಪಿಶಾಚನು ತನಗಿರುವ ಕಾಲವು ಕೊಂಚವೆಂದು ತಿಳಿದು, ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ,” ಎಂಬುದಾಗಿ ಹೇಳಿತು.


ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.


ನಾನು ಫರೋಹನ ಬಳಿಗೆ ಬಂದು ನಿಮ್ಮ ಹೆಸರಿನಲ್ಲಿ ಮಾತನಾಡಿದಂದಿನಿಂದ, ಈ ಜನರಿಗೆ ಅವನು ಕೇಡನ್ನೇ ಮಾಡುತ್ತಿದ್ದಾನೆ. ನೀವು ನಿಮ್ಮ ಜನರನ್ನು ರಕ್ಷಿಸಲಿಲ್ಲವಲ್ಲಾ,” ಎಂದನು.


ಆಗ, ಕಾನಾನ್ಯ ಸ್ತ್ರೀಯೊಬ್ಬಳು ಬಂದು ಅವರಿಗೆ, “ಸ್ವಾಮೀ, ದಾವೀದನ ಪುತ್ರನೇ, ನನ್ನನ್ನು ಕರುಣಿಸು. ನನ್ನ ಮಗಳು ದೆವ್ವದ ಕಾಟದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.


ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ಆದರೆ ಯೇಸು ಕೈಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದು ನಿಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು