Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:43 - ಕನ್ನಡ ಸಮಕಾಲಿಕ ಅನುವಾದ

43 ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43-44 ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಇದಲ್ಲದೆ ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿದ್ದು ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವದಕ್ಕಿಂತ ಕೈಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತುಜೊ ಹಾತ್ ತುಜೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಜಾಲ್ಯಾರ್, ತೊ ಕಾತ್ರುನ್ ಕಾಡುನ್ ಸೊಡ್, ದೊನ್ ಹಾತಾ ಘೆವ್ನ್ ಕನ್ನಾಚ್ ಇಜಿನಸಲ್ಲಿ ಆಗ್ ಹೊತ್ತ್ಯಾ ನರ್ಕಾತ್ ಜಾತಲ್ಯಾಚ್ಯಾನ್ಕಿ, ಎಕ್ ಹಾತ್ ನಸ್ತಾನಾ ನಿರಂತರ್ ಜಿವನಾಕ್ ಜಾತಲೆ ಕವ್ಡೆಕಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:43
23 ತಿಳಿವುಗಳ ಹೋಲಿಕೆ  

“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.


ಆದರೆ ನೀನು ಔತಣಮಾಡಿಸಿದಾಗ, ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಆಹ್ವಾನಿಸು.


ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ.


ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.


“ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಲು, ಆ ಮನೆಯಜಮಾನನು ಕೋಪಗೊಂಡು ತನ್ನ ಸೇವಕನಿಗೆ, ‘ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ, ಬಡವರನ್ನೂ ಊನವಾದವರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿ ಕರೆದುಕೊಂಡು ಬಾ,’ ಎಂದನು.


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.


ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣವನ್ನು ಶುದ್ಧಮಾಡಿ ಗೋಧಿಯನ್ನು ತಮ್ಮ ಕಣಜದಲ್ಲಿ ಕೂಡಿಸುವರು. ಆದರೆ ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


ಅದನ್ನು ಬಿಟ್ಟುಕೊಡಲು ಇಷ್ಟಪಡದೆ, ತನ್ನ ಬಾಯಿಯೊಳಗೆ ದೀರ್ಘಸಮಯ ಇಟ್ಟುಕೊಂಡರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು