Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:9 - ಕನ್ನಡ ಸಮಕಾಲಿಕ ಅನುವಾದ

9 ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದುಬರುವಾಗ, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ - ನೀವು ಕಂಡಿರುವದನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎದ್ದು ಬರುವತನಕ ಯಾರಿಗೂ ತಿಳಿಸಬಾರದೆಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸು ಮತ್ತು ಆ ಶಿಷ್ಯರು ಹಿಂತಿರುಗಿ ಬೆಟ್ಟದಿಂದ ಕೆಳಗಿಳಿದು ಬರುತ್ತಿರುವಾಗ, ಆತನು ಅವರಿಗೆ, “ನೀವು ಬೆಟ್ಟದ ಮೇಲೆ ನೋಡಿದ ಸಂಗತಿಗಳ ಬಗ್ಗೆ ಯಾರಿಗೂ ಹೇಳಬೇಡಿ. ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬರುವವರೆಗೆ ಕಾದುಕೊಂಡಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಮಡ್ಡಿ ವೈಯ್ನಾ ಉತ್ರುನ್ ಯೆತಾನಾ “ಮಾನ್ಸಾಚೊ ಲೆಕ್ ಮರುನ್, ಅನಿ ಪರ್ತುನ್ ಝಿತ್ತೊ ಹೊವ್ನ್ ಉಟುನ್ ಯೆಯ್ ಪತರ್ ತುಮಿ ಮಡ್ಡಿ ವರ್‍ತಿ ಬಗಟಲ್ಲೆ ಕೊನಾಕ್ಬಿ ಸಾಂಗುನಕಾಸಿ” ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:9
15 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.


ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.


ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ


“ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.


ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.


ಈತನು ಜಗಳವಾಡುವವನಲ್ಲ, ಕೂಗಾಡುವವನಲ್ಲ; ಬೀದಿಗಳಲ್ಲಿ ಈತನ ಸ್ವರವನ್ನು ಯಾರೂ ಕೇಳಿಸಿಕೊಳ್ಳುವುದೂ ಇಲ್ಲ.


ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು,” ಎಂದು ಹೇಳಿದರು.


ಯಾವ ಮನುಷ್ಯನಿಗೂ ಇದನ್ನು ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟೂ ಹೆಚ್ಚಾಗಿ ಪ್ರಚಾರಮಾಡಿದರು.


ಕೂಡಲೇ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನೇ ಹೊರತು ಇನ್ನಾರನ್ನೂ ಕಾಣಲಿಲ್ಲ.


“ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.


ಧ್ವನಿಯಾದ ನಂತರ, ಅವರು ಯೇಸುವನ್ನು ಮಾತ್ರ ಕಂಡರು. ಅವರು ಕಂಡವುಗಳನ್ನು ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು