Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:13 - ಕನ್ನಡ ಸಮಕಾಲಿಕ ಅನುವಾದ

13 ಲಾಕೀಷಿನ ನಿವಾಸಿಗಳೇ, ಕುದುರೆಗಳನ್ನು ರಥಕ್ಕೆ ಕಟ್ಟಿರಿ, ಚೀಯೋನ್ ಮಗಳ ಪಾಪವು ನಿನ್ನಿಂದ ಪ್ರಾರಂಭವಾಯಿತು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಲಾಕೀಷಿನವರೇ ಅಶ್ವಗಳನ್ನು ರಥಕ್ಕೆ ಕಟ್ಟಿರಿ. ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ, ಹೌದು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಲಾಕೀಷಿನವರೇ, ಅಶ್ವಗಳನ್ನು ರಥಕ್ಕೆ ಕಟ್ಟಿರಿ; ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ; ಹೌದು, ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೀಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:13
27 ತಿಳಿವುಗಳ ಹೋಲಿಕೆ  

ಅಸ್ಸೀರಿಯದ ಅರಸನು ತನ್ನ ಅತಿ ಪ್ರಮುಖ ಅಧಿಕಾರಿಯನ್ನೂ, ಮುಖ್ಯ ನಾಯಕರನ್ನೂ, ಸೈನ್ಯಾಧಿಕಾರಿಯನ್ನೂ ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನೂ ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡರು.


ಇದರ ತರುವಾಯ ಅಸ್ಸೀರಿಯದ ಅರಸನಾದ ಸನ್ಹೇರೀಬನೂ, ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ, ಅವನು ಯೆರೂಸಲೇಮಿನಲ್ಲಿರುವ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ, ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳುಹಿಸಿದನು.


ಆದ್ದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ದೂತರನ್ನು ಕಳುಹಿಸಿದನು:


ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? ಯೆಹೂದದ ಉನ್ನತ ಪೂಜಾಸ್ಥಳ ಯಾವುದು? ಅದು ಯೆರೂಸಲೇಮು ಅಲ್ಲವೋ?


“ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ, ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆಸಿದಳು.


ರಾವುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವುದು. ಪೊದೆಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು. ಪಟ್ಟಣಗಳೆಲ್ಲಾ ನಾಶವಾಗುವುವು. ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.


ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.


ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.


ಮದ್ಮೇನ ದಿಕ್ಕುಪಾಲಾಯಿತು. ಗೆಬೀಮಿನ ನಿವಾಸಿಗಳು ಓಡಿಹೋಗಲು ಕೂಡಿಕೊಂಡರು.


ಅದೋರೈಮನ್ನೂ, ಲಾಕೀಷನ್ನೂ, ಅಜೇಕವನ್ನೂ,


ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ಲಾಕೀಷ್, ಬೊಚ್ಕತ್, ಎಗ್ಲೋನ್,


ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು.


ಅವರನ್ನು ಹೊರಗೆ ತಂದಮೇಲೆ ಅವರಲ್ಲಿ ಒಬ್ಬನು, “ಹಿಂದಕ್ಕೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ. ನೀನು ನಾಶವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗು,” ಎಂದನು.


ಹೀಗೆಯೇ ಪ್ರತಿಯೊಬ್ಬನು ತನ್ನ ನೇಮಕದ ಪ್ರಕಾರ ಕುದುರೆಗಳಿಗೋಸ್ಕರವೂ, ಸವಾರಿ ಒಂಟೆಗಳಿಗೋಸ್ಕರವೂ, ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ, ಹುಲ್ಲನ್ನೂ ತಂದರು.


ಯೆರೂಸಲೇಮಿನವರು ಅಮಚ್ಯನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.


ಆಗ ಅಸ್ಸೀರಿಯದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡನು.


ಕಾಡುಕೋಣವನ್ನು ಹಗ್ಗದಿಂದ ನೇಗಿಲ ಸಾಲಿಗೆ ಕಟ್ಟಿರುವೆಯಾ? ಅದು ಕಣಿವೆಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೆ?


ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಎಂದರೆ, ಲಾಕೀಷಿಗೂ ಅಜೇಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿದನು. ಏಕೆಂದರೆ ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ಮಾತ್ರ ನಿಂತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು