Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:6 - ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬವನ್ನಾಗಿಯೂ ದ್ರಾಕ್ಷಿಬಳ್ಳಿ ನೆಡುವ ಸ್ಥಳವನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು, ಅದರ ಅಸ್ತಿವಾರಗಳನ್ನು ಹೊರಗೆಡಹುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದಕಾರಣ, “ನಾನು ಸಮಾರ್ಯವನ್ನು ಧೂಳಿನ ರಾಶಿಯನ್ನಾಗಿಯೂ ದ್ರಾಕ್ಷಾತೋಟಕ್ಕೆ ಒಳ್ಳೆಯ ಬಯಲನ್ನಾಗಿಯೂ ಮಾಡುವೆನು. ಕಲ್ಲುಹೆಂಟೆಗಳನ್ನು ಕಣಿವೆಗೆ ಸುರಿದುಬಿಡುವೆನು. ಅದರ ತಳಪಾಯವೇ ತೆರೆದು ಕಾಣುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ ದ್ರಾಕ್ಷೆಯ ತೋಟದ ಮಡಿಗಳನ್ನಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿಗೆ ಸುರಿದು ಬಿಡುವೆನು; ಅದರ ಅಸ್ತಿವಾರಗಳನ್ನು ಬೈಲುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಿಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಕೇವಲ ಅಸ್ತಿವಾರಗಳು ಕಾಣುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:6
19 ತಿಳಿವುಗಳ ಹೋಲಿಕೆ  

ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ, ನೆಲಸಮಮಾಡಿ, ಅದರ ಅಸ್ತಿವಾರವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವಾಗ, ನೀವು ಅದರಲ್ಲಿ ನಾಶವಾಗುವಿರಿ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿದುಬರುವುದು.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಬಂಗಾರವು ಹೇಗೆ ಮಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧಸ್ಥಳದ ಕಲ್ಲುಗಳೂ ಬೀದಿಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.


“ ‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.


ಆಗ ಯೇಸು ಅವರಿಗೆ, “ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.


ನಿನ್ನ ಜನರ ರಕ್ಷಣೆಗೋಸ್ಕರವೂ, ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ.


ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”


ಬಾಬಿಲೋನ್ ದಿಬ್ಬಗಳಾಗುವುದು. ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವಾಗಿ ಆಶ್ಚರ್ಯಕ್ಕೂ, ನಾಶಕ್ಕೂ, ಸಿಳ್ಳಿಡುವಿಕೆಗೂ ಒಳಗಾಗುವುದು.


“ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮೇಲೆ ನನ್ನ ಕೈಯನ್ನು ಚಾಚಿ, ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ, ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ದುರ್ಗದಂತೆ ಎತ್ತರವಾಗಿರುವ ನಿನ್ನ ಕೋಟೆಗಳನ್ನು ಕೆಡವಿ, ತಗ್ಗಿಸಿ, ನೆಲಸಮಮಾಡುವರು, ಅದು ಧೂಳುಪಾಲಾಗುವುದು.


ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀರಿ.


ಅವನು ಒಂದು ಪಟ್ಟಣದಲ್ಲಿ ಹೊಕ್ಕಿರುವುದಾದರೆ, ಇಸ್ರಾಯೇಲರೆಲ್ಲರೂ ಆ ಪಟ್ಟಣಕ್ಕೆ ಹಗ್ಗಗಳನ್ನು ತಂದುಹಾಕಿದ ತರುವಾಯ, ನಾವು ಒಂದು ಹರಳಾದರೂ ಅಲ್ಲಿ ಉಳಿಯದಂತೆ ಆ ಊರನ್ನು ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿಬಿಡೋಣ,” ಎಂದನು.


ದಮಸ್ಕದ ವಿಷಯವಾದ ಪ್ರವಾದನೆ: ಇಗೋ, ದಮಸ್ಕವು ಇನ್ನು ಪಟ್ಟಣವಾಗಿರದೆ ಅದು ಹಾಳು ದಿಬ್ಬವಾಗಿರುವುದು.


ಸಮಾರ್ಯದ ಪರ್ವತಗಳಲ್ಲಿ ತಿರುಗಿ ದ್ರಾಕ್ಷಿಗಿಡಗಳನ್ನು ನೆಡುವೆ. ರೈತರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭವಿಸುವರು.


ಇಸ್ರಾಯೇಲಿನ ಅರಸನಾದ ಏಲನ ಮಗ ಹೋಶೇಯನ ಆಳ್ವಿಕೆಯ ಏಳನೆಯ ವರ್ಷ, ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆಹಾಕಿದನು.


ಮೂರು ವರ್ಷದ ತರುವಾಯ ಸಮಾರ್ಯವನ್ನು ಅಸ್ಸೀರಿಯದವರು ಸ್ವಾಧೀನಮಾಡಿಕೊಂಡರು. ಇಸ್ರಾಯೇಲಿನ ಅರಸನಾದ ಹೋಶೇಯನ ಒಂಬತ್ತನೆಯ ವರ್ಷವಾದ, ಹಿಜ್ಕೀಯನ ಆರನೆಯ ವರ್ಷದಲ್ಲಿ ಸಮಾರ್ಯವು ಸ್ವಾಧೀನವಾಯಿತು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು