Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:3 - ಕನ್ನಡ ಸಮಕಾಲಿಕ ಅನುವಾದ

3 ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕುತ್ತಾರೆ. ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಮಡಕೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ಪ್ರಜೆಯ ಮೈ ಚರ್ಮವನ್ನು ಸುಲಿಯುವುದಲ್ಲದೆ ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಆವಿಗೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ, ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ; ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ನನ್ನ ಜನರ ದೇಹದಿಂದ ಚರ್ಮ ತೆಗೆದು ಎಲುಬುಗಳನ್ನು ತುಂಡುಮಾಡಿ ಅವರನ್ನು ನಾಶಮಾಡುತ್ತೀರಿ. ತಪ್ಪಲೆಯೊಳಗೆ ಬೇಯಿಸಲು ಮಾಂಸ ತುಂಡುಮಾಡಿ ಹಾಕುವಂತೆ ನೀವು ಅವರ ಎಲುಬುಗಳನ್ನು ತುಂಡುಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:3
11 ತಿಳಿವುಗಳ ಹೋಲಿಕೆ  

ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ.


ಅವರು, ‘ಇತ್ತೀಚಿಗೆ ನಮ್ಮ ಮನೆಗಳು ನಿರ್ಮಾಣವಾಗಿಲ್ಲವೇ? ಈ ಪಟ್ಟಣವು ಪಾತ್ರೆ, ಮತ್ತು ನಾವು ಅದರಲ್ಲಿರುವ ಮಾಂಸ,’ ಎನ್ನುತ್ತಾರೆ.


ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ದುಷ್ಟರು ನನ್ನನ್ನು ಬೀಳಿಸಬೇಕೆಂದು ನನಗೆ ವಿರೋಧವಾಗಿ ಸಮೀಪಿಸುವಾಗ, ನನ್ನ ವೈರಿಗಳು ತಾವೇ ಎಡವಿಬಿದ್ದರು.


ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ಮಾಂಸದ ತುಂಡುಗಳನ್ನೂ ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೆಯ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆಯ ಎಲುಬುಗಳ ಜೊತೆ ಅದನ್ನು ತುಂಬಿಸು.


ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ. ಯುದ್ಧದಿಂದ ತಿರುಗಿಕೊಂಡು ನಿರ್ಭಯವಾಗಿ ಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊಳ್ಳುತ್ತೀರಿ.


ಖಡ್ಗಗಳಂತೆ ಹಲ್ಲುಗಳುಳ್ಳವರೂ ಚೂರಿಗಳಂತೆ ದವಡೆಗಳುಳ್ಳವರೂ ಬಡವರನ್ನು ಭೂಮಿಯಿಂದಲೂ ದಿಕ್ಕಿಲ್ಲದವರನ್ನು ಮಾನವಕುಲದಿಂದಲೂ ಕಬಳಿಸುವವರೂ ಆಗಿದ್ದಾರೆ.


ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ.


ಬಡವರನ್ನು ನುಂಗುವವರೇ, ನಾಡಿನ ಬಡವರನ್ನು ಮುಗಿಸಿಬಿಡಬೇಕೆಂದಿರುವವರೇ, ಇದನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು