Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:11 - ಕನ್ನಡ ಸಮಕಾಲಿಕ ಅನುವಾದ

11 ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಲವು ರಾಷ್ಟ್ರಗಳು ನಿನಗೆ ವಿರುದ್ಧ ಕೂಡಿಬಂದು: “ಜೆರುಸಲೇಮನ್ನು ಹೊಲಸುಮಾಡೋಣ, ‘ಸಿಯೋನಿನ ನಾಶವನ್ನು ಕಣ್ಣಾರೆ ನೋಡೋಣ’ ಎನ್ನುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 [ಯೆರೂಸಲೇಮು] ಹೊಲಸಾಗಿ ಹೋಗಲಿ, ಚೀಯೋನಿನ ನಾಶನವನ್ನು ಕಣ್ಣುತುಂಬಾ ನೋಡೋಣ ಅಂದುಕೊಳ್ಳುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಷ್ಟೋ ಜನಾಂಗಗಳು ನಿನ್ನ ವಿರುದ್ಧ ಯುದ್ಧಕ್ಕೆ ಬಂದಿವೆ. “ಅಲ್ಲಿ ನೋಡಿ, ಚೀಯೋನ್, ಬನ್ನಿ ಆಕ್ರಮಣ ಮಾಡೋಣ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:11
15 ತಿಳಿವುಗಳ ಹೋಲಿಕೆ  

ನಿನ್ನ ಸಹೋದರನ ವಿಪತ್ತಿನ ದಿನದಲ್ಲಿ ನೀನು ಅವನನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಯೆಹೂದದ ಜನರು ನಾಶವಾದಾಗ ನೀನು ಸಂತೋಷಪಡಬಾರದಿತ್ತು. ಅವರ ಕಷ್ಟದ ದಿವಸದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;


ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಅವನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.


ಚೀಯೋನನ್ನು ದ್ವೇಷಿಸುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.


ಅದರ ಅಭಿಪ್ರಾಯವೋ ಹಾಗಲ್ಲ. ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು.


ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!


ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ ಬಾಧಿಸುವ ಸಕಲ ಜನಾಂಗಗಳು ರಾತ್ರಿಯ ದರ್ಶನದ ಕನಸಿನಂತೆ ಮಾಯವಾಗುವುವು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಟೈರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವುದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.


ಅವರು ಏಕ ಮನಸ್ಕರಾಗಿ ಆಲೋಚನೆ ಮಾಡಿಕೊಂಡಿದ್ದಾರೆ. ನಿಮಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗಳಿಗೆ ಮುಂಚೆ ಪ್ರವಾದಿಸಿದೆಯಲ್ಲವೇ?


ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು