Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:8 - ಕನ್ನಡ ಸಮಕಾಲಿಕ ಅನುವಾದ

8 ಕುರಿಮಂದೆಯ ಬುರುಜೇ, ಚೀಯೋನ್ ಪುತ್ರಿಯ ದುರ್ಗವೇ, ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು. ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕುರಿಮಂದೆಗೆ ರಕ್ಷಣೆ ಕೊಡುವ ಗೋಪುರವೇ, ಚೀಯೋನ್ ಯುವತಿಯ ಸುಭದ್ರ ಕೋಟೆಯೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವುದು. ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಿಂಡಿಗೆ ರಕ್ಷಕವಾದ ಹೂಡೆಯೇ, ಚೀಯೋನ್ ಯುವತಿಯ ಗುಡ್ಡವೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವದು, ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಿಂಡುಗಳ ಗೋಪುರವೇ, ನಿನ್ನ ಸಮಯವು ಬರುವದು. ಚೀಯೋನಿನ ಒಫೆಲ್ ಗುಡ್ಡವೇ, ನಿನಗೆ ತಿರುಗಿ ಅಧಿಕಾರ ದೊರಕುವುದು. ಹೌದು, ಮೊದಲಿನಂತೆಯೇ ಜೆರುಸಲೇಮಿನಲ್ಲೇ ರಾಜ್ಯವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:8
23 ತಿಳಿವುಗಳ ಹೋಲಿಕೆ  

ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”


ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರುಗಿರಿ. ಎರಡರಷ್ಟು ಕೊಡುವೆನೆಂದು ನಿನಗೆ ಈ ಹೊತ್ತೇ ಪ್ರಕಟಿಸುತ್ತೇನೆ.


ರಕ್ಷಕನು ಏಸಾವಿನ ಪರ್ವತವನ್ನು ಆಳಲು ಚೀಯೋನ್ ಪರ್ವತವನ್ನು ಏರುವನು. ಆಗ ರಾಜ್ಯವು ಯೆಹೋವ ದೇವರದಾಗಿರುವುದು.


ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರಿನ ಆಚೆ ತನ್ನ ಗುಡಾರವನ್ನು ಹಾಕಿದನು.


ಸಕಲ ರಾಜತ್ವ, ಅಧಿಕಾರ, ಶಕ್ತಿ, ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿಯೂ ಸಹ, ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೋಕದಲ್ಲಿ ಕ್ರಿಸ್ತರನ್ನು ತಮ್ಮ ಬಲಗಡೆಯಲ್ಲಿ ಕೂರಿಸಿಕೊಂಡರು.


ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ಆದರೂ ದಾವೀದನು ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.


ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು, ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು.”


“ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.


ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’


ಅವನು ಅದಕ್ಕೆ ಬೇಲಿಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿ ಸಸಿಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷಿ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಬಿಟ್ಟಿತು.


ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು. ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.


ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ.


ನೀವೇ ನನಗೆ ಆಶ್ರಯವಾಗಿದ್ದೀರಿ. ಶತ್ರುವಿಗೆ ಎದುರಾಗಿ ಬಲವಾದ ಬುರುಜಾಗಿದ್ದೀರಿ.


“ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ ಅವರನ್ನು ಒಟ್ಟಾಗಿ ಕೂಡಿಸುವೆನು. ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು.


ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿ ಬರುವ ಮೂಲೆ ಬುರುಜಿನ ಎದುರಿನ ಭಾಗವನ್ನು ಊಜೈಯ ಮಗನಾದ ಪಾಲಾಲನೂ, ಇವನ ಆಚೆಯಲ್ಲಿ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.


ದ್ವಾರಗಳೇ ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.


ನಿನ್ನ ಕೊರಳು ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲಾದ ಬುರುಜಿನ ಹಾಗೆ ಇದೆ. ಅದರಲ್ಲಿ ಶೂರರ ಸಾವಿರ ಗುರಾಣಿಗಳು ತೂಗುಹಾಕಿ ಇವೆ.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು