Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:12 - ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಮಂತ್ರತಂತ್ರವನ್ನು ನಾಶಮಾಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನಲ್ಲಿ ಕಣಿಯವರು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ನುರಿತ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನ ಮಂತ್ರವಾದಿಗಳನ್ನು ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು, ನಿನ್ನಲ್ಲಿ ಕಣಿಯವರು ಇನ್ನಿರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ಮಾಟಮಂತ್ರಗಳನ್ನು ಇನ್ನು ಮುಂದೆ ಮಾಡದಿರುವೆ. ಭವಿಷ್ಯ ಮತ್ತು ಕಣಿ ಹೇಳುವ ಜನರು ಇನ್ನು ಮುಂದೆ ನಿನ್ನಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:12
14 ತಿಳಿವುಗಳ ಹೋಲಿಕೆ  

ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಚಿನ್ನದ ವಿಗ್ರಹಗಳನ್ನೂ ಇಲಿ ಬಾವಲಿಗಳಿಗಾಗಿ ಬಿಸಾಡಿಬಿಡುವರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ವಿಗ್ರಹಗಳು ಸಂಪೂರ್ಣವಾಗಿ ಹೋಗಿಬಿಡುವುವು.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ನೀವು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಶಕುನ ನೋಡುವವರ ಹಾಗೂ ಕಣಿಹೇಳುವವರ ಮಾತನ್ನು ಕೇಳುತ್ತಿದ್ದರು. ನಿಮ್ಮನ್ನಾದರೋ ನಿಮ್ಮ ದೇವರಾದ ಯೆಹೋವ ದೇವರು ಹಾಗೆ ಮಾಡಲು ಅನುಮತಿಸಲಿಲ್ಲ.


ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ, ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ಕಾಪಾಡು,” ಎಂದು ಬೇಡಿಕೊಳ್ಳುವನು.


ಅವರು ನಿನ್ನ ಮನೆಗಳನ್ನು ಸುಟ್ಟು, ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯತೀರಿಸುವರು. ನೀನು ವ್ಯಭಿಚಾರ ಮಾಡುವುದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯರಿಗೆ ಕೂಲಿ ಸಹ ಕೊಡುವುದನ್ನು ನಿಲ್ಲಿಸುವೆನು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು