Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:16 - ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:16
31 ತಿಳಿವುಗಳ ಹೋಲಿಕೆ  

“ನಾಚಿಕೆ ಪಡುತ್ತೇವೆ, ಏಕೆಂದರೆ ನಿಂದೆಯನ್ನು ಕೇಳಿದ್ದೇವೆ. ಅವಮಾನ ನಿಮ್ಮ ಮುಖಗಳನ್ನು ಮುಚ್ಚಿದೆ. ಏಕೆಂದರೆ ವಿದೇಶಿಗಳು ಯೆಹೋವ ದೇವರ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸಿದ್ದಾರೆ.”


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.


ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.


ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ನಮ್ಮ ನೆರೆಯವರಿಗೆ ನಾವು ನಿಂದೆಯಾಗಿದ್ದೇವೆ. ನಮ್ಮ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವೂ ಆಗಿದ್ದೇವೆ.


ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ಎಫ್ರಾಯೀಮು, ವಿಗ್ರಹಗಳನ್ನು ಅನುಸರಿಸಲು ಮನಸ್ಸು ಮಾಡಿದ ಕಾರಣ, ಅವನು ನ್ಯಾಯತೀರ್ಪಿಗೆ ಗುರಿಯಾಗಿ, ಹಿಂಸೆಗೆ ಒಳಗಾದನು.


ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ನಾನು ನನ್ನ ಜನರನ್ನು ಇತರ ಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ, ಅವರನ್ನು ಹಿಂಬಾಲಿಸುವವರು ನಾಶವಾಗುವರು.


ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,


ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಯುವುದು, ಅದು ಆರಿಹೋಗುವುದಿಲ್ಲ.’


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದನು. ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.


ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು.


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


ಆದರೂ ಎಫ್ರಾಯೀಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದ್ದರಿಂದ ಯೆಹೋವ ದೇವರು ಅದರ ರಕ್ತಾಪರಾಧವನ್ನು ಅದರ ಮೇಲೆ ಬರಮಾಡುವರು. ಅವನ ನಿಂದೆಯನ್ನು ಯೆಹೋವ ದೇವರು ಅವನ ಮೇಲೆ ಬರಮಾಡುವರು.


“ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” ಎಂದು ಅವರ ಪ್ರವಾದಿಗಳು ಹೇಳುತ್ತಾರೆ.


ಆದ್ದರಿಂದ ನಾನು ಸಹ ನಿನ್ನನ್ನು ಹೊಡೆದು ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.


ಅವನು ಅಹಾಬನ ಕುಟುಂಬದಂತೆಯೇ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು, ಏಕೆಂದರೆ ಅವನ ತಂದೆಯ ಮರಣದ ನಂತರ ಅವರು ಅವನ ಸಲಹೆಗಾರರಾದರು. ಆದಕಾರಣ ಎಲ್ಲವೂ ನಾಶವಾಯಿತು.


ನಮ್ಮನ್ನು ಇತರ ದೇಶಗಳವರ ಗಾದೆಗೆ ಆಸ್ಪದ ಮಾಡಿರುವಿರಿ; ಅವರು ನಮ್ಮನ್ನು ಪರಿಹಾಸ್ಯದ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು