Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:3 - ಕನ್ನಡ ಸಮಕಾಲಿಕ ಅನುವಾದ

3 ನನ್ನ ಜನರೇ, ನಾನು ನಿಮಗೆ ಏನು ಮಾಡಿದ್ದೇನೆ? ನಾನು ನಿಮ್ಮ ಮೇಲೆ ಭಾರ ಹಾಕಿದ್ದೇನೋ? ನನಗೆ ಉತ್ತರಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು, ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಹೇಳುವುದೇನೆಂದರೆ, “ನನ್ನ ಜನರೇ, ನಾನು ಮಾಡಿದ್ದೇನು ತಿಳಿಸಿರಿ. ನಿಮಗೆ ವಿರೋಧವಾಗಿ ನಾನು ಏನಾದರೂ ಮಾಡಿದ್ದೇನೋ? ನಿಮಗೆ ಜೀವಿಸಲು ಕಷ್ಟವಾಗುವಂತೆ ಮಾಡಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:3
11 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?


“ಹಾ, ನನ್ನ ಜನರು ನನ್ನ ಮಾತನ್ನು ಕೇಳಿದರೆ ಒಳ್ಳೆದಾಗಿತ್ತು! ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಮೇಲಾಗುತ್ತಿತ್ತು,


“ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ?


“ನನ್ನ ಜನರೇ, ಕೇಳಿರಿ, ನಾನು ಮಾತನಾಡುತ್ತಿದ್ದೇನೆ, ಇಸ್ರಾಯೇಲೇ, ನಿಮಗೆ ವಿರೋಧವಾಗಿ ಹೀಗೆಂದು ನಾನು ಸಾಕ್ಷಿ ಕೊಡುವೆನು: ನಾನು ದೇವರು, ಹೌದು ನಿಮ್ಮ ದೇವರು ನಾನೇ.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.


ನನ್ನ ಜನರೇ ಕೇಳಿರಿ, ಇಸ್ರಾಯೇಲೇ, ನೀನು ನನ್ನ ಮಾತನ್ನು ಕೇಳಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.


ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.


ನನ್ನ ದ್ರಾಕ್ಷಿತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿ ಫಲವನ್ನು ಫಲಿಸುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿದ್ದು ಏಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು