Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:5 - ಕನ್ನಡ ಸಮಕಾಲಿಕ ಅನುವಾದ

5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದನ್ನೆಲ್ಲಾ ಸ್ಮರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:5
37 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ, ಅವರು ಮೋವಾಬಿನ ಪುತ್ರಿಯರ ಸಂಗಡ ಜಾರತ್ವ ಮಾಡಲಾರಂಭಿಸಿದರು.


ನೀರು ಸೇದುವ ಸ್ಥಳಗಳ ಹತ್ತಿರ ಗಾಯಕರ ಶಬ್ದದಿಂದ ಯೆಹೋವ ದೇವರ ನೀತಿಸಾಧನೆಗಳನ್ನು ವರ್ಣಿಸುತ್ತಾರೆ. ಇಸ್ರಾಯೇಲಿನಲ್ಲಿ ಅವರ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ಮಹತ್ಕಾರ್ಯಗಳನ್ನು ತಿರುಗಿ ಪ್ರಕಟಿಸುವರು. “ಆಗ ಯೆಹೋವ ದೇವರ ಜನರು ಪಟ್ಟಣದ ಬಾಗಿಲುಗಳಿಗೆ ಇಳಿದು ಬರುವರು.


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನಿನಿಂದ ಹೊರಟು, ಯೆರಿಕೋವಿನ ಪೂರ್ವದಿಕ್ಕಿನ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದುಕೊಂಡರು.


ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.


ಯೆಹೋವ ದೇವರೇ, ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ಜೀವಿಸಮಾಡಿರಿ, ನಿಮ್ಮ ನೀತಿಗನುಸಾರ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಬಿಡಿಸಿರಿ.


ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.


ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.


ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.


ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.


ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು.


ಆಗ ಬಾಲಾಕನು ಬಿಳಾಮನಿಗೆ, “ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸುವುದು ಒಂದು ವೇಳೆ ದೇವರಿಗೆ ಯುಕ್ತವಾಗಿದ್ದೀತು,” ಎಂದನು.


ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು.


ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು.


ದೇವರೇ, ನಿಮ್ಮ ನೀತಿಯು ಆಕಾಶವನ್ನು ಮುಟ್ಟುತ್ತದೆ. ಮಹತ್ಕಾರ್ಯಗಳನ್ನು ಮಾಡಿದ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ?


ನಿಮ್ಮನ್ನು ತಿಳಿದವರಿಗೆ ನಿಮ್ಮ ಪ್ರೀತಿಯು ಮುಂದುವರೆಯಲಿ ಯಥಾರ್ಥ ಹೃದಯದವರಿಗೆ ನಿಮ್ಮ ನೀತಿಯೂ ನೆಲೆಯಾಗಲಿ.


ಆದ್ದರಿಂದ ಈಗ ನಿಲ್ಲಿರಿ. ಯೆಹೋವ ದೇವರು ನಿಮಗೂ, ನಿಮ್ಮ ಪಿತೃಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಯೆಹೋವ ದೇವರ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.


ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ ಯೆಷೀಮೋತಿನಿಂದ ಮೋವಾಬಿನ ಬಯಲುಗಳಲ್ಲಿರುವ ಆಬೇಲ್ ಶಿಟ್ಟೀಮಿನ ಪರ್ಯಂತರದವರೆಗೂ ಇಳಿದುಕೊಂಡರು.


ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು.


ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು.


ಈಗ ಚಿಪ್ಪೋರನ ಮಗ ಮೋವಾಬಿನ ಅರಸ ಬಾಲಾಕನಿಗಿಂತ ಯಾವುದರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿಗೆ ವಿರೋಧವಾಗಿ ಎಂದಾದರೂ ವಿವಾದ ಮಾಡಿದನೋ ಅಥವಾ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನೋ?


ಚೀಯೋನ್ ಪಟ್ಟಣವು ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ಚಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.


ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು.


ನೀವು ಇರುವವರೆಗೆ ಎಂದಿಗೂ ಅವರ ಏಳಿಗೆಯನ್ನು, ಕ್ಷೇಮವನ್ನು ಬಯಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು