Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:9 - ಕನ್ನಡ ಸಮಕಾಲಿಕ ಅನುವಾದ

9 ಕೇಳು! ಯೆಹೋವ ದೇವರು ಪಟ್ಟಣವನ್ನು ಕರೆಯುತ್ತಿದ್ದಾರೆ. ನಿಮ್ಮ ನಾಮಕ್ಕೆ ಭಯಪಡುವುದು ಜ್ಞಾನ. ಕೋಲು ಮತ್ತು ಅದನ್ನು ನೇಮಿಸಿದ ವ್ಯಕ್ತಿಯನ್ನು ಎಚ್ಚರಿಕೆಯಿಂದ ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ದನಿಗೈದು ಪಟ್ಟಣದ ಕಡೆಗೆ ಕೂಗುತ್ತಾನೆ; (ನಿನ್ನ ನಾಮದಲ್ಲಿ ಭಯಭಕ್ತಿಯಿಡುವದು ಸುಜ್ಞಾನವೇ;) [ಬೀಸುವ] ದಂಡಕ್ಕೆ ಕಿವಿಗೊಡಿರಿ, ಅದನ್ನು ನೇವಿುಸಿದವನು ಯಾವನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. “ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. ಆದ್ದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡುಕೊಂಡವನನ್ನೂ ಗೌರವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:9
43 ತಿಳಿವುಗಳ ಹೋಲಿಕೆ  

ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.


ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.


ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇಳುವ ಹೊಗೆಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ಆತನ ನಾಲಿಗೆಯು ದಹಿಸುವ ಅಗ್ನಿಯಂತಿದೆ.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ!


ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.”


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”


ಪಟ್ಟಣದೊಳಗಿನ ಗದ್ದಲದ ಶಬ್ದವು ದೇವಾಲಯದೊಳಗಿಂದ ಸ್ವರವು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಯೆಹೋವ ದೇವರ ಸ್ವರವಾಗಿದೆ.


ಕೋಟೆಯ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗುವುದು. ಅಲ್ಲಿ ದನಕರುಗಳು ಮೇದು ಮಲಗುವ ಗೋಮಾಳವಾಗಿದೆ. ಅವು ಅಲ್ಲಿನ ಚಿಗುರುಗಳನ್ನು ತಿಂದುಬಿಡುವುವು.


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.


ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.


ಜ್ಞಾನಿಗಳು ಇವುಗಳನ್ನು ಗಮನಿಸಲಿ, ಯೆಹೋವ ದೇವರ ಪ್ರೀತಿಕೃತ್ಯಗಳನ್ನು ಗ್ರಹಿಸಿಕೊಳ್ಳಲಿ.


ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.


ದೇವರೇ, ನಿಮ್ಮ ಹೆಸರಿಗೆ ತಕ್ಕಂತೆಯೇ ನಿಮ್ಮ ಸ್ತೋತ್ರವು ಭೂಮಿಯ ಕಟ್ಟಕಡೆಯವರೆಗೂ ಇದೆ; ನಿಮ್ಮ ಬಲಗೈ ನೀತಿಯಿಂದ ತುಂಬಿದೆ.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ.


“ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು; ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ.


ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ಅದು ಹೇಗೆ ಸುಮ್ಮನಿರುವುದು? ಅಷ್ಕೆಲೋನಿಗೆ ವಿರೋಧವಾಗಿ ಮತ್ತು ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ? ಅಲ್ಲಿ ಅದನ್ನು ನೇಮಿಸಿದ್ದಾನೆ.”


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ದುಷ್ಟಮನೆತನವೇ ನೀನು ಕೆಟ್ಟದ್ದಾಗಿ ಸಂಪಾದಿಸಿದ್ದನ್ನು ಶಾಪಗ್ರಸ್ತರಾದ ಕಡಿಮೆ ಅಳತೆಯನ್ನು ನಾನು ಮರೆಯಬೇಕೋ?


ನನಗೆ ನೇಮಿಸಿದ್ದನ್ನು ದೇವರು ಈಡೇರಿಸುತ್ತಾರೆ. ಇಂಥ ಅನೇಕ ಯೋಜನೆಗಳು ದೇವರಲ್ಲಿವೆ.


ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು