Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:1 - ಕನ್ನಡ ಸಮಕಾಲಿಕ ಅನುವಾದ

1 ಎಂತಹ ಸಂಕಟ ನನ್ನದು! ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವವರ ಹಾಗೆಯೂ ದ್ರಾಕ್ಷಿ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣುಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ನನ್ನ ಗತಿಯನ್ನು ಏನೆಂದು ಹೇಳಲಿ! ಮಾಗಿದ ಹಣ್ಣನ್ನು ಕೊಯ್ದು ದ್ರಾಕ್ಷೆಯ ಹಕ್ಕಲನ್ನು ಆಯ್ದ [ತೋಟದ] ಸ್ಥಿತಿಗೆ ಬಂದಿದ್ದೇನೆ; ತಿನ್ನುವದಕ್ಕೆ ಗೊಂಚಲೇ ಇಲ್ಲ, ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:1
14 ತಿಳಿವುಗಳ ಹೋಲಿಕೆ  

“ನಾನು ಮರುಭೂಮಿಯಲ್ಲಿ ದ್ರಾಕ್ಷಾಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು. ಆದರೆ ಅವರು ಬಾಳ್ ಪೆಯೋರನ ಹತ್ತಿರ ಬಂದು ನಾಚಿಕೆಯ ವಿಗ್ರಹಕ್ಕೆ ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ಪ್ರೀತಿಸಿದ ವಿಗ್ರಹಗಳ ಹಾಗೆ ಅಸಹ್ಯರಾದರು.


ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ ಅಲಂಕಾರದ ಶೃಂಗಾರವಾಗಿದ್ದು, ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ ಅವರು ನುಂಗುತ್ತಾರೆ.


ಓಲಿವ್ ಮರವನ್ನು ಬಡಿದ ಮೇಲೆಯೂ, ದ್ರಾಕ್ಷಿ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವುದು.


ಆದರೂ ಎಣ್ಣೆಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ ಎರಡು ಮೂರು ಕಾಯಿಗಳಿರುವುವು. ಅದರ ಫಲವತ್ತಾದ ಆ ಮರದ ರೆಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿದಿರುವುವು. ಅದೇ ರೀತಿಯಾಗಿ, ಇಸ್ರಾಯೇಲರಲ್ಲಿ ಕೆಲವರು ಮಾತ್ರ ಉಳಿದಿರುವರು, ಎಂದು ಇಸ್ರಾಯೇಲಿನ ಯೆಹೋವ ದೇವರು ಹೇಳುತ್ತಾರೆ.


‘ಈಗ ನನಗೆ ಕಷ್ಟ! ಏಕೆಂದರೆ, ಯೆಹೋವ ದೇವರು ನನ್ನ ನೋವಿಗೆ ಚಿಂತೆಯನ್ನು ಕೂಡಿಸಿದ್ದಾರೆ. ನಿಟ್ಟುಸಿರು ಬಿಡುವುದರಿಂದ ದಣಿದಿದ್ದೇನೆ. ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿಯಲ್ಲಾ.’


ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.


ಏಕೆಂದರೆ ಪ್ರಸವವೇದನೆ ಪಡುವವಳಂತೆ, ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, “ಅಯ್ಯೋ, ನನಗೀಗ ಕಷ್ಟ! ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” ಎಂದು ಅರಚಿಕೊಳ್ಳುತ್ತಾಳೆ.


ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ.


ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.


ಅವರು ಯೆಹೋವ ದೇವರಿಗೆ ತರುವ ಅವರ ದೇಶದಲ್ಲಿರುವ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವುವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.


ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?


“ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು