Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:11 - ಕನ್ನಡ ಸಮಕಾಲಿಕ ಅನುವಾದ

11 ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೂರ್ಯನು ಮೇಲೇರಿದಂತೆ ಬಿಸಿಲು ಹೆಚ್ಚಾಗುವುದು. ಸೂರ್ಯನ ತಾಪದಿಂದ ಗಿಡಗಳು ಒಣಗಿಹೋಗುವವು; ಹೂವುಗಳು ಉದುರಿ ಹೋಗುವವು. ಹೂವು ಸುಂದರವಾಗಿತ್ತು, ಆದರೆ ಈಗ ಅದು ಒಣಗಿಹೋಯಿತು. ಐಶ್ವರ್ಯವಂತನಿಗೂ ಇದೇ ರೀತಿಯಾಗುವುದು. ಅವನು ತನ್ನ ವ್ಯಾಪಾರದ ಬಗ್ಗೆ ಯೋಜನೆಗಳನ್ನು ಮಾಡುತ್ತಿರುವಾಗಲೇ ಸತ್ತುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್, ದಿಸ್ ಉಗಾವಲ್ಲ್ಯಾ ತನ್ನಾ ತೊ ಅಪ್ನಾಚ್ಯಾ ಝಳಾನಿ ಗವ್ತಾಕ್ ಬಾಡುನ್ ಜಾಯ್ ಸಾರ್ಕೆ ಕರ್ತಾನಾ, ತ್ಯಾ ಗವ್ತಾಚೆ ಫುಲ್ಲ್‌ಬಿ ಝಡುನ್ ಜಾವ್ನ್ ತೆಚ್ಯಾ ರುಪಾಚೆ ಬರೆಪಾನ್ ನಾಸ್ ಹೊವ್ನ್ ಜಾತಾ. ತಸೆಚ್ ಸಾವ್ಕಾರ್ಕಿಬಿ ಅಪ್ಲ್ಯಾ ವಾಟೆ ವೈನಿ ಬಾವುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:11
27 ತಿಳಿವುಗಳ ಹೋಲಿಕೆ  

ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.


ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.


ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.


ಈ ನಿರೀಕ್ಷೆಯು ಲಯ, ಕಳಂಕ, ಕ್ಷಯಗಳಿಲ್ಲದ ಬಾಧ್ಯತೆಯಾಗಿದೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.


ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.


ನನ್ನ ಹೃದಯವು ಬಾಡಿಹೋಗಿ ಹುಲ್ಲಿನ ಹಾಗೆ ಒಣಗಿಹೋಗಿದೆ; ನಾನು ಊಟಮಾಡುವುದಕ್ಕೆ ಸಹ ಮರೆತುಬಿಡುತ್ತೇನೆ.


ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.


ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ ಅಲಂಕಾರದ ಶೃಂಗಾರವಾಗಿದ್ದು, ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ ಅವರು ನುಂಗುತ್ತಾರೆ.


ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ!


ತಾಯಿಯ ಗರ್ಭದಿಂದ ಅವನು ಹೇಗೆ ಬರಿಗೈಯಲ್ಲಿ ಬಂದನೋ, ಹಾಗೆ ಬರಿಗೈಯಲ್ಲಿ ಗತಿಸಿ ಹೋಗುವನು. ಅವನು ಪ್ರಯಾಸ ಪಟ್ಟದ್ದಕ್ಕಾಗಿ ಯಾವುದನ್ನು ತೆಗೆದುಕೊಂಡು ಹೋಗುವುದಿಲ್ಲ.


ನನ್ನ ದಿವಸಗಳು ಸಾಯಂಕಾಲದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತಿದ್ದೇನೆ.


ಏಕೆಂದರೆ, ಅವರು ಹುಲ್ಲಿನ ಹಾಗೆ ಬೇಗ ಒಣಗಿ ಹೋಗುವರು. ಹಸಿರಾದ ಸೊಪ್ಪಿನ ಹಾಗೆ ಬಾಡಿಹೋಗುವರು.


“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.


ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಒಣಗಿ ಬಿದ್ದು ಹೋಗುತ್ತದೆ.


ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ, ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ;


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?


‘ಕಡೆಯವರಾದ ಇವರು ಒಂದೇ ತಾಸು ಕೆಲಸಮಾಡಿದ್ದಾರೆ, ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸಮಾಡಿದ ನಮ್ಮನ್ನು ನೀನು ಇವರಿಗೆ ಸಮಮಾಡಿದ್ದಿ,’ ಎಂದರು.


ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು