Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:17 - ಕನ್ನಡ ಸಮಕಾಲಿಕ ಅನುವಾದ

17 ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಸಗ್ಳ್ಯಾ ಬರ್‍ಯಾ ಮನಾನ್ ದಾನ್ ಅನಿ ಸಗ್ಳಿ ಪುರಾ ಹೊಲ್ಲಿ ದೆನ್ಗಿ ದಿಸ್, ಚಂದ್ರಾಮ್ ಅನಿ ಚಿಕಿಯಾ ರಚಲ್ಲ್ಯಾಕ್ನಾ ಖಾಯ್ಲ್ ಯೆತಾ. ತೊ ಕನ್ನಾಚ್ ಬದ್ಲಿನಾ. ನಾ ಹೊಲ್ಲ್ಯಾರ್, ಕನ್ನಾಬಿ ಬದ್ಲಿನಾ. ಅದಲ್ ಬದಲ್ ಹೊತಲಿ ಸಾವ್ಳಿ ಸೈತ್ ತೆಚ್ಯಾರ್ ಪಡಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:17
62 ತಿಳಿವುಗಳ ಹೋಲಿಕೆ  

ಅದಕ್ಕೆ ಯೋಹಾನನು, “ಪರಲೋಕದಿಂದ ಒಬ್ಬ ಮನುಷ್ಯನಿಗೆ ದಯಪಾಲಿಸದ ಹೊರತು ಅವನು ಯಾವುದನ್ನೂ ಹೊಂದಲಾರನು.


ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!


ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ.


ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


“ನಾನು ಯೆಹೋವ ದೇವರು. ನಾನು ಬದಲಾಗುವುದಿಲ್ಲ. ಆದ್ದರಿಂದ ನೀವು ಯಾಕೋಬಿನ ವಂಶಜರೇ, ನಾಶವಾಗುವುದಿಲ್ಲ.


ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ.


ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.


ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ?


ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.


ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.


ಯೋಸೇಫನು ಫರೋಹನಿಗೆ ಉತ್ತರವಾಗಿ, “ಅದನ್ನು ನಾನು ಹೇಳಲಾರೆ, ಆದರೆ ದೇವರು ಫರೋಹನಿಗೆ ಮೆಚ್ಚಿಕೆಯಾದ ಉತ್ತರವನ್ನು ಕೊಡುವರು,” ಎಂದನು.


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.


ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.


ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು.


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.


ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ.


ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.


ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.


ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ.


ಯೆಹೋವ ದೇವರು ಒಳ್ಳೆಯದನ್ನು ಕೊಡುವರು. ನಮ್ಮ ಭೂಮಿಯು ತನ್ನ ಸುಗ್ಗಿಯನ್ನು ಕೊಡುವುದು.


ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ.


ದೊಡ್ಡ ಬೆಳಕುಗಳನ್ನು ನಿರ್ಮಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಯೇಸು ಅವನಿಗೆ, “ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.”


ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು