Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:26 - ಕನ್ನಡ ಸಮಕಾಲಿಕ ಅನುವಾದ

26 ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕೊನ್ಬಿ ಅಪ್ನಿ ದೆವಸ್ಪಾನಾಚೊ ಮನುನ್ ಚಿಂತ್ತಾ ಹೊಲ್ಲ್ಯಾರ್ ಅನಿ ಅಪ್ಲ್ಯಾಚಿ ಜಿಬಿಲ್ ಸಂಬಾಳುನ್ ಘೆಯ್ನಾ, ತೊ ಅಪ್ನಾಚ್ಯಾ ಅಪ್ನಾಕುಚ್ ಪಸ್ವುನ್ ಘೆತಾ. ತೆಚ್ಯಾ ದೆವುಸ್ಪಾನಾಕ್ ಕಾಯ್ ಬಿ ಕಿಮ್ಮತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:26
37 ತಿಳಿವುಗಳ ಹೋಲಿಕೆ  

ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.


ಯೆಹೋವ ದೇವರೇ, ನನ್ನ ಬಾಯಿಗೆ ಕಾವಲಿಡಿರಿ; ನನ್ನ ತುಟಿಗಳ ಕದವನ್ನು ಕಾಯಿರಿ;


“ಬಾಳನ್ನು ಪ್ರೀತಿಸಿ ಸುದಿನಗಳನ್ನು ನೋಡುವುದಕ್ಕೆ ಇಷ್ಟವುಳ್ಳವನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.


ಅಶ್ಲೀಲತೆ, ಬುದ್ಧಿಹೀನ ಮಾತು, ಅಸಭ್ಯ ಹರಟೆ ಇವು ಬೇಡ, ಇವು ಅಯುಕ್ತವಾಗಿವೆ, ಪ್ರತಿಯಾಗಿ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.


ಬುದ್ಧಿಹೀನನ ವಕ್ರ ತುಟಿಗಳಿಗಿಂತ, ನಿರ್ದೋಷವಾಗಿ ನಡೆಯುವ ಬಡವನು ಉತ್ತಮ.


ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು, ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ನಿಯಂತ್ರಿಸಿಕೋ.


ನೀತಿವಂತರ ಬಾಯಲ್ಲಿ ಜ್ಞಾನವು ಫಲಿಸುತ್ತದೆ; ಆದರೆ ಮೂರ್ಖನ ನಾಲಿಗೆಯು ಕತ್ತರಿಸಲಾಗುವುದು.


ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ. ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು.


ನಿಮ್ಮ ಸಂಭಾಷಣೆ ಯಾವಾಗಲೂ ಪೂರ್ಣ ಕೃಪೆಯುಳ್ಳದ್ದೂ, ಉಪ್ಪಿನಿಂದ ಹದವುಳ್ಳದ್ದೂ ಆಗಿರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.


ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ.


ಆದ್ದರಿಂದ ನೀವು ಕೇಳುವ ವಿಷಯಗಳಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು; ಇಲ್ಲದವರ ಕಡೆಯಿಂದ ತಮಗಿದೆ ಎಂದುಕೊಳ್ಳುವುದನ್ನು ಸಹ, ಅವರಿಂದ ಕಿತ್ತುಕೊಳ್ಳಲಾಗುವುದು,” ಎಂದು ಹೇಳಿದರು.


ಏನೂ ಅಲ್ಲದವನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿಕೊಂಡರೆ, ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ.


ಮನುಷ್ಯ ದೃಷ್ಟಿಗೆ ಸರಿ ತೋರುವ ಒಂದು ಮಾರ್ಗವಿದೆ, ಆದರೆ ಅದರ ಅಂತ್ಯವು ಮರಣದ ಮಾರ್ಗಗಳೇ.


ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.


ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ.


ಮನುಷ್ಯರ ಆಜ್ಞೆಗಳನ್ನೇ ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುತ್ತಾರೆ.’


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.


ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.


ಅವರು ಮನುಷ್ಯರ ಆಜ್ಞೆಗಳನ್ನು ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ಆರಾಧಿಸುವುದು ವ್ಯರ್ಥ.’”


“ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,


ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.


ಅದು ಮಾತ್ರವಲ್ಲ, ದೇವರು ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ದೇವರ ಬಗ್ಗೆ ಸಾಕ್ಷಿಕೊಟ್ಟ ನಾವೂ ಸುಳ್ಳುಸಾಕ್ಷಿಗಳಾಗಿ ಕಂಡುಬರುವೆವು. ದೇವರು ಕ್ರಿಸ್ತನನ್ನು ಎಬ್ಬಿಸದಿದ್ದರೆ ಸತ್ತವರನ್ನೂ ದೇವರು ಎಬ್ಬಿಸುವುದಿಲ್ಲ.


ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ.


ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.


ವಿವೇಕವಿಲ್ಲದ ಕುದುರೆಯ ಹಾಗೆಯೂ, ಹೇಸರಗತ್ತೆಯ ಹಾಗೆಯೂ ಇರಬೇಡಿರಿ; ಬಾರಿನಿಂದಲೂ, ಕಡಿವಾಣದಿಂದಲೂ ಅವುಗಳನ್ನು ನಿಯಂತ್ರಿಸಬೇಕು, ಇಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.


ಮೂರ್ಖನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಪ್ರಮಾಣಗಳು ಬೇಕೋ?


ನೀವು ಎಷ್ಟೋ ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ?


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.


ನೀನು ದೇವರ ವಿರುದ್ಧ ನಿನ್ನ ಕೋಪವನ್ನು ಹೊರಹಾಕುತ್ತಿರುವೆ? ನಿನ್ನ ಬಾಯಿಂದ ಕೋಪದ ಮಾತುಗಳನ್ನು ಹೊರಡಿಸುತ್ತೀಯಲ್ಲಾ?


ಏಕೆಂದರೆ, ದೇವರು ನನ್ನ ಬಿಲ್ಲಿನ ಹಗ್ಗವನ್ನು ಸಡಲಿಸಿ, ಅವರಿಂದ ನನ್ನನ್ನು ಬಾಧಿಸಿದ್ದಾರೆ. ಆದ್ದರಿಂದ ಈಗ ಅವರು ಯಾವುದೇ ನಿರ್ಬಂಧವಿಲ್ಲದಂತೆ ನನ್ನ ಮೇಲೆ ಹೀಗೆಲ್ಲಾ ವರ್ತಿಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು