Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:5 - ಕನ್ನಡ ಸಮಕಾಲಿಕ ಅನುವಾದ

5 ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ತುಮ್ಚ್ಯಾತ್ಲ್ಯಾ ಕೊನಾಕ್ ತರಿಬಿ ಬುದ್ದ್ ಕಮ್ಮಿ ಹೊಲ್ಲಿ ರ್‍ಹಾಲ್ಯಾರ್ ತೊ ದೆವಾಕ್ಡೆ ಮಾಗುಂದಿತ್, ತೆ ತೆಕಾ ಗಾವ್ತಾ. ದೆವ್ ಮುಲಾಜೊ ಬಗಿನಸ್ತಾನಾ ಸಗ್ಳ್ಯಾಕ್ನಿ ಬರ್‍ಯಾ ಮನಾನ್ ದಿತಲೊ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:5
31 ತಿಳಿವುಗಳ ಹೋಲಿಕೆ  

ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.


ನಾನು ಈ ಜನರನ್ನು ಪರಿಪಾಲಿಸುವುದಕ್ಕೆ ಜ್ಞಾನವನ್ನೂ, ತಿಳುವಳಿಕೆಯನ್ನೂ ಕೊಡಿರಿ. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ಮತ್ತು ನಾವು ಏನೇನು ಬೇಡಿಕೊಳ್ಳುತ್ತೇವೋ ಅದನ್ನು ದೇವರಿಂದ ನಾವು ಹೊಂದಿಕೊಳ್ಳುತ್ತೇವೆ. ಏಕೆಂದರೆ ನಾವು ಅವರ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಯಲ್ಲಿ ಮೆಚ್ಚಿಗೆಯಾದವುಗಳನ್ನು ಮಾಡುವವರಾಗಿದ್ದೇವೆ.


ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ ಎಲ್ಲಾ ವಿಧವಾದ ಕೌಶಲ್ಯದಿಂದಲೂ ತುಂಬಿಸಿದ್ದೇನೆ.


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.


ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.


ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ತರುವಾಯ ತಮ್ಮ ಹೆಚ್ಚಾದ ಮಹತ್ಕಾರ್ಯಗಳು ನಡೆದ ಪಟ್ಟಣಗಳು, ದೇವರ ಕಡೆಗೆ ತಿರುಗಿಕೊಳ್ಳದೆ ಇದ್ದುದರಿಂದ ಯೇಸು ಅವುಗಳನ್ನು ಗದರಿಸತೊಡಗಿ,


ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?


ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.


ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು