Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:19 - ಕನ್ನಡ ಸಮಕಾಲಿಕ ಅನುವಾದ

19 ದೇವರು ಒಬ್ಬರೇ ಎಂದು ನೀನು ನಂಬುತ್ತೀ, ಅದು ಒಳ್ಳೆಯದು, ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರು ಒಬ್ಬನೇ ಎಂದು ನೀನು ನಂಬುವವನು. ಹಾಗೆ ನಂಬುವದು ಒಳ್ಳೇದು. ದೆವ್ವಗಳು ಕೂಡ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಒಬ್ಬನೇ ದೇವರಿರುವನೆಂದು ನೀವು ನಂಬಿದ್ದೀರಿ. ಒಳ್ಳೆಯದು! ಆದರೆ ದೆವ್ವಗಳೂ ಅದನ್ನು ನಂಬುತ್ತವೆ ಮತ್ತು ಭಯದಿಂದ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ಗಿರೆ ಸೈತ್ ದೆವ್ ಎಕ್ಲೊಚ್ ಮನುನ್ ವಿಶ್ವಾಸ್ ಕರ್ತಾತ್ ಅನಿ ಭಿಂಯಾನ್ ಥರ್ ಥರ್‌ತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:19
31 ತಿಳಿವುಗಳ ಹೋಲಿಕೆ  

“ನಜರೇತಿನ ಯೇಸುವೇ, ನಮ್ಮ ಗೊಡವೆ ನಿಮಗೆ ಏಕೆ? ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರಾ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರ ಪರಿಶುದ್ಧರು,” ಎಂದು ಹೇಳಿದನು.


ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.


ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು.


ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.


ಇಸ್ರಾಯೇಲರೇ, ಕೇಳಿರಿ: ದೇವರಾದ ಯೆಹೋವ ನಮ್ಮ ದೇವರು; ಯೆಹೋವ ದೇವರು ಒಬ್ಬರೇ.


ಒಂದು ಪಕ್ಷಕ್ಕಿಂತಲೂ ಹೆಚ್ಚಿನವನಾಗಿದ್ದರೆ ಮಾತ್ರ ಮಧ್ಯಸ್ಥನ ಅಗತ್ಯವಿರುವುದು; ದೇವರಾದರೋ ಒಬ್ಬರೇ.


ಹೆದರಬೇಡ, ಇಲ್ಲವೆ ಭಯಪಡಬೇಡ! ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ ಮತ್ತು ಅದನ್ನು ಪ್ರಕಟಿಸಲಿಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಇಲ್ಲ, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ದುರಾತ್ಮವು ಅವರಿಗೆ ಉತ್ತರವಾಗಿ, “ಯೇಸುವನ್ನು ನಾನು ಬಲ್ಲೆ, ಪೌಲನೂ ನನಗೆ ಗೊತ್ತು, ಆದರೆ ನೀವು ಯಾರು?” ಎಂದು ಕೇಳಿ,


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.


ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ.


“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,” “ನಾನು ಇರುವಾತನೇ ಆಗಿದ್ದೇನೆಂದು, ನೀವು ತಿಳಿದು, ನಂಬಿ, ಗ್ರಹಿಸಿರಿ; ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆಯೂ, ನನ್ನ ಅನಂತರದಲ್ಲಿಯೂ ಯಾವ ದೇವರೂ ಇರುವುದಿಲ್ಲ.


ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.


ಯೇಸು ಉತ್ತರವಾಗಿ ಅವನಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು, ‘ಇಸ್ರಾಯೇಲೇ, ಕೇಳು: ನಮ್ಮ ದೇವರಾದ ಕರ್ತ ಒಬ್ಬರೇ ಕರ್ತನಾಗಿದ್ದಾರೆ.


ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಪೂರ್ವದಿಂದ ಪಶ್ಚಿಮದವರೆಗೆ ಇರುವವರೆಲ್ಲರೂ ನನ್ನ ಹೊರತು ಮತ್ತೊಬ್ಬನು ಇಲ್ಲ, ನಾನೇ ಯೆಹೋವ ದೇವರು ಮತ್ತೊಬ್ಬ ದೇವರು ಇಲ್ಲ ಎಂದು ನನ್ನನ್ನು ತಿಳಿದುಕೊಳ್ಳುವರು.


ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.


“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!” ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ.


ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


ಯೇಸು ಇನ್ನೂ ಅವರಿಗೆ, “ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ.


ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.


ಆದರೆ ಯೆಹೋವ ದೇವರು, “ನೀನು ಹೀಗೆ ಕೋಪ ಮಾಡಿಕೊಳ್ಳುವುದು ಸರಿಯೋ?” ಎಂದು ಯೋನನಿಗೆ ಹೇಳಿದರು.


ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು