Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:4 - ಕನ್ನಡ ಸಮಕಾಲಿಕ ಅನುವಾದ

4 ನೀವು ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿಗಳಾಗಿರುತ್ತೀರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀವು ನಿಮ್ಮಲ್ಲೇ ಭೇದಭಾವ ಮಾಡುತ್ತೀರಿ; ಅಲ್ಲದೆ ನೀವು ಮಾಡುವ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ನಿಮ್ಮಲ್ಲಿ ಭೇದಮಾಡುವವರಾಗಿ ಅನ್ಯಾಯವಾದ ತೀರ್ಪನ್ನು ಮಾಡುವವರಾದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಮಾಡುತ್ತಿರುವುದೇನು? ಕೆಲವರನ್ನು ಇತರ ಜನರಿಗಿಂತ ಬಹಳ ಮುಖ್ಯರೆಂದು ಪರಿಗಣಿಸುತ್ತಿರುವಿರಿ. ನಿಮ್ಮ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಚ್ಯಾ ತುಮ್ಚ್ಯಾ ಮದ್ದಿ ಭೆದ್ ಬಾವ್ ಕರುನ್ ಹೊಲ್ಯಾ ಸಿವಾಯ್? ನಾ ತರ್ ಬುರ್ಶ್ಯಾ ಉದ್ದೆಶಾನ್ ನ್ಯಾಯ್ ನಿರ್ನಯ್ ಕರುಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:4
12 ತಿಳಿವುಗಳ ಹೋಲಿಕೆ  

ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ,” ಎಂದರು.


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.


“ಆದ್ದರಿಂದ ನೀವು ನನ್ನ ಮಾರ್ಗಗಳನ್ನು ಕೈಗೊಳ್ಳದೆ, ನನ್ನ ನಿಯಮವನ್ನು ಬೋಧಿಸುವಾಗ ಮುಖದಾಕ್ಷಿಣ್ಯ ಮಾಡಿದ ಪ್ರಕಾರವೇ, ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆಯಾದವರನ್ನಾಗಿಯೂ, ನೀಚರನ್ನಾಗಿಯೂ ಮಾಡುವೆನು.”


“ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ. ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ?


ಜನನಾಯಕರೇ, ನೀವು ನ್ಯಾಯವಾಗಿ ತೀರ್ಪನ್ನು ನುಡಿಯುತ್ತೀರೋ? ಜನರಲ್ಲಿ ನೀವು ಯಥಾರ್ಥವಾಗಿ ನ್ಯಾಯತೀರಿಸುವಿರೋ?


ದೇವರು ಬಡವನ ಬಲಗಡೆಯಲ್ಲಿ ನಿಂತು, ಅವನ ಪ್ರಾಣವನ್ನು ಖಂಡಿಸುವವರಿಂದ ಅವನನ್ನು ರಕ್ಷಿಸುವರು.


“ನೋಡಿರಿ, ನಿಮ್ಮ ಆಲೋಚನೆಗಳನ್ನು ನಾನು ಬಲ್ಲೆನು. ನೀವು ನನಗೆ ವಿರೋಧವಾಗಿ ಮಾಡುವ ಕುಯುಕ್ತಿಗಳನ್ನೂ ತಿಳಿದಿದ್ದೇನೆ.


ಅನಂತರ ಕರ್ತದೇವರು, “ಈ ಅನ್ಯಾಯಗಾರನಾದ ನ್ಯಾಯಾಧಿಪತಿಯು ಹೇಳಿಕೊಂಡಿದ್ದನ್ನು ಕೇಳಿರಿ.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು