Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:5 - ಕನ್ನಡ ಸಮಕಾಲಿಕ ಅನುವಾದ

5 ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾಜ್ಯಾ ಭಾವಾನು ಅನಿ ಭೆನಿಯಾನು ದೆವಾನ್ ಹ್ಯಾ ಜಗಾತ್ ಹ್ಯಾ ಗರಿಬಾಕ್ನಿ ವಿಶ್ವಾಸಾತ್ ಸಾವ್ಕಾರ್ ಹೊವ್ಕ್ ಸಾಟ್ನಿ ಅನಿ ಅಪ್ನಾಚೊ ಪ್ರೆಮ್ ಕರ್ತಲ್ಯಾಚ್ಯಾ ಸಾಟ್ನಿ ತೆನಿ ಗೊಸ್ಟ್ ದಿವ್ನ್ ಸಾಂಗಲ್ಲ್ಯಾ ರಾಜಾಚೊ ವಾರಿಸ್ದಾರ್ ಹೊವ್ಕ್ ಸಾಟ್ನಿ ಮನುನ್ ತೆನಿ ತೆಂಕಾ ಎಚುನ್ ಕಾಡಲ್ಲೆ ಹಾಯ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:5
54 ತಿಳಿವುಗಳ ಹೋಲಿಕೆ  

“ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.


ಯೇಸು ತಮ್ಮ ಶಿಷ್ಯರನ್ನು ನೋಡಿ, ಹೇಳಿದ್ದೇನೆಂದರೆ: “ಬಡವರಾದ ನೀವು ಧನ್ಯರು, ದೇವರ ರಾಜ್ಯವು ನಿಮ್ಮದೇ.


ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


“ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತ ಆಗದಿರುವವನು ಇವನಂತೆಯೇ ಇರುವನು,” ಎಂದರು.


ಈ ನಿರೀಕ್ಷೆಯು ಲಯ, ಕಳಂಕ, ಕ್ಷಯಗಳಿಲ್ಲದ ಬಾಧ್ಯತೆಯಾಗಿದೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಈಜಿಪ್ಟಿನ ನಿಕ್ಷೇಪಕ್ಕಿಂತಲೂ ಕ್ರಿಸ್ತ ಯೇಸುವಿಗಾಗಿ ನಿಂದೆಯನ್ನು ಹೊಂದುವುದು ಮಹಾಐಶ್ವರ್ಯವೆಂದೆಣಿಸಿಕೊಂಡನು. ಏಕೆಂದರೆ ಅವನು ತನ್ನ ಬಹುಮಾನಕ್ಕಾಗಿ ಎದುರು ನೋಡಿದನು.


“ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.


ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.”


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು.


ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ.


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


ದುಃಖ ಪಡುವವರಾಗಿದ್ದರೂ ಹರ್ಷಿಸುತ್ತಿದ್ದೆವು, ಬಡವರಾಗಿದ್ದಾಗಲೂ ಅನೇಕರನ್ನು ಐಶ್ವರ್ಯವಂತರನ್ನಾಗಿ ಮಾಡಿದೆವು, ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಾಗಿದ್ದೇವೆ.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಅಂಥವರು ಒಳ್ಳೆಯದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲು ಕೊಡುವುದರಲ್ಲಿ ಸಿದ್ಧರಾಗಿರುವವರೂ ಪರೋಪಕಾರ ಮಾಡುವವರೂ ಆಗಿರಬೇಕೆಂದು ಅವರನ್ನು ಪ್ರಬೋಧಿಸು.


“ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.


ನೀವು ಯಾವ ದೇವರ ರಾಜ್ಯಕ್ಕಾಗಿ ಕಷ್ಟವನ್ನು ಅನುಭವಿಸುತ್ತಿರುವಿರೋ, ಆ ರಾಜ್ಯಕ್ಕಾಗಿ ನೀವು ಯೋಗ್ಯರೆಂದು ಎಣಿಕೆಯಾಗಲು ಇದು ದೇವರ ನೀತಿಯುಳ್ಳ ನ್ಯಾಯತೀರ್ಪಿಗೆ ಸ್ಪಷ್ಟವಾದ ನಿದರ್ಶನವಾಗಿದೆ.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


“ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು.


ಆಗ ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು, ವಿಶೇಷವಾಗಿ ಬಡವಾದ ಮಂದೆಯನ್ನು ಮೇಯಿಸಿದೆನು. ನಾನು ಎರಡು ಕೋಲುಗಳನ್ನು ತೆಗೆದುಕೊಂಡೆನು. ಒಂದಕ್ಕೆ “ಕೃಪೆ” ಎಂದೂ ಮತ್ತೊಂದಕ್ಕೆ “ಐಕ್ಯ” ಎಂದು ಹೆಸರಿಟ್ಟೆನು. ಹೀಗೆ ಮಂದೆಯನ್ನು ಮೇಯಿಸಿದೆನು.


ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು. ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸುವರು.


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


“ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.


ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.


ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.


ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಯೇಸುವನ್ನು ನಂಬಿದ್ದುಂಟೇ?


ನನ್ನ ತಂದೆ ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ, ನಾನೂ ನಿಮಗೆ ರಾಜ್ಯವನ್ನು ನೇಮಕ ಮಾಡುತ್ತೇನೆ.


ಯೇಸು ಜನಸಮೂಹವನ್ನು ಪುನಃ ತಮ್ಮ ಬಳಿಗೆ ಕರೆದು, “ಎಲ್ಲರೂ ನನ್ನ ಮಾತುಗಳನ್ನು ಕೇಳಿರಿ, ಅರ್ಥಮಾಡಿಕೊಳ್ಳಿರಿ.


ಅದೇ ದಿವಸದಲ್ಲಿ ಅದು ರದ್ದುಗೊಂಡಿತು. ಆಗ ನನ್ನನ್ನು ನೋಡಿಕೊಳ್ಳುತ್ತಿದ್ದ ಬಡ ಕುರಿ ಮಂದೆಯು, ಅದು ಯೆಹೋವ ದೇವರ ವಾಕ್ಯವೆಂದು ತಿಳಿದುಕೊಂಡಿತು.


ಆದರೆ ನಿನ್ನ ಮಧ್ಯದಲ್ಲಿ ಸೌಮ್ಯರನ್ನೂ ದೀನರನ್ನೂ ಉಳಿಸುವೆನು. ಇವರು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಡುವರು.


“ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.


ಆದ್ದರಿಂದ ನನ್ನ ಮಕ್ಕಳೇ, ನನಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.


ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಭೂಮಿ ರೂಪ ತಾಳುತ್ತದೆ; ನೆರಿಗೆ ಕಟ್ಟಿದ ಉಡಿಗೆಯಂತೆ ಭೂಮಿಯ ವಿಶೇಷತೆಗಳು ಕಾಣಿಸುತ್ತವೆ.


ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.


ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,


ಯೋತಾಮನಿಗೆ ಇದನ್ನು ತಿಳಿಸಿದಾಗ, ಅವನು ಹೋಗಿ ಗೆರಿಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು, ತನ್ನ ಸ್ವರವನ್ನೆತ್ತಿ ಕೂಗಿ ಅವರಿಗೆ, “ಶೆಕೆಮಿನ ಹಿರಿಯರೇ, ದೇವರು ನಿಮ್ಮನ್ನು ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.


ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.


ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ.


ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು