Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:9 - ಕನ್ನಡ ಸಮಕಾಲಿಕ ಅನುವಾದ

9 ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದೀರಿ. ಮಾತ್ರವಲ್ಲದೆ ಮೋಶೆಯ ನಿಯಮದ ಪ್ರಕಾರ ಅಪರಾಧಿಗಳೆಂದು ನಿರ್ಣಯ ಹೊಂದುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದನ್ನು ಬಿಟ್ಟು ಪಕ್ಷಪಾತ ಮಾಡಿದರೆ ನೀವು ಪಾಪಮಾಡುತ್ತೀರಿ ಮತ್ತು ಧರ್ಮಶಾಸ್ತ್ರ ನಿಮ್ಮನ್ನು ಅಪರಾಧಿಗಳೆಂದು ನಿರ್ಣಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದನ್ನು ಬಿಟ್ಟು ಪಕ್ಷಪಾತ ತೋರಿಸುವವರಾಗಿದ್ದರೆ ನೀವು ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದಿಂದ ತೀರ್ಮಾನಿಸಲ್ಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತುಮಿ ಭೆದ್-ಭಾವ್ ಕರ್ತ್ಯಾಸಿ ಹೊಲ್ಯಾರ್, ಪಾಪ್ ಕರ್ತ್ಯಾಸಿ ಅನಿ ಖಾಯ್ದ್ಯೊ ಮೊಡಲ್ಲ್ಯಾಂಚ್ಯಾ ಸಾರ್ಕೆ ಹೊವ್ನ್ ಚುಕಿದಾರ್ ಮನುನ್ ಘೆತ್ಯಾಶಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:9
13 ತಿಳಿವುಗಳ ಹೋಲಿಕೆ  

“ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.


ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.


ಪಾಪಮಾಡುವ ಪ್ರತಿಯೊಬ್ಬನೂ ನಿಯಮವನ್ನು ಮೀರುವವನಾಗಿದ್ದಾನೆ. ನಿಯಮವನ್ನು ಮೀರುವುದೇ ಪಾಪ.


ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ಆ ಸಹಾಯಕರು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ವಿಷಯಗಳಲ್ಲಿ ಲೋಕದವರಿಗೆ ಮನವರಿಕೆಯನ್ನು ಮಾಡುವರು.


ನನ್ನಲ್ಲಿ ಪಾಪವಿದೆಯೆಂದು ರುಜುವಾತು ಪಡಿಸುವವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ ನೀವು ನನ್ನನ್ನು ಏಕೆ ನಂಬುವುದಿಲ್ಲ?


ಎಲ್ಲರಿಗೆ ನ್ಯಾಯತೀರಿಸುವುದಕ್ಕೆ ಬರುವರು. ಮಾತ್ರವಲ್ಲದೆ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರೋಧವಾಗಿ ಆಡಿದ ಎಲ್ಲಾ ದೂಷಣೆಗಳ ವಿಷಯವಾಗಿ ಅವರನ್ನು ಖಂಡಿಸಲು ಬರುವರು,” ಎಂಬುದಾಗಿ ಪ್ರವಾದಿಸಿದನು.


“ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.


ಆದರೆ ನೀವೆಲ್ಲರೂ ಪ್ರವಾದಿಸುತ್ತಿರಲು, ಅವಿಶ್ವಾಸಿಯಾಗಲಿ, ಅನ್ವೇಷಕನಾಗಲಿ ಒಳಗೆ ಬಂದರೆ, ಅವನು ತಾನು ಪಾಪಿಯೆಂಬ ಮನವರಿಕೆಯನ್ನು ಹೊಂದುವನು. ಅವನು ಎಲ್ಲರ ಮಾತಿನಿಂದ ಪರಿಶೋಧಿತನಾಗುವನು.


ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ.


ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು