Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:14 - ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ತುಮ್ಚ್ಯಾ ಮನಾತ್ನಿ ತುಮಿ ಬುರ್ಶಿ ಇರ್ಸ್ಯಾ, ಕುಸ್ಡೆಪಾನ್, ಸ್ವಾರ್ಥ್ ರಾಲ್ಯಾರ್, ತುಮ್ಚ್ಯಾ ಬುದ್ವಂತ್ಕಿಚ್ಯಾ ಮೊಟೆ ಪಾನಾಚ್ಯಾ ವಿಶಯಾತ್ ಬೊಲುನ್ ಖರ್ಯಾಚ್ಯಾ ವಿಶಯಾತ್ ಪಾಪ್ ಕರುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:14
42 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮಲ್ಲಿ ಹೊಟ್ಟೆಕಿಚ್ಚೂ ಸ್ವಾರ್ಥ ಉದ್ದೇಶವೂ ಇರುವಲ್ಲಿ ಗಲಿಬಿಲಿಯೂ ಸಕಲ ವಿಧವಾದ ಕೆಟ್ಟ ಅಭ್ಯಾಸವೂ ಇರುತ್ತವೆ.


ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ,


ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.


ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ?


ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.


ನಾನು ಬಂದಾಗ ಒಂದು ವೇಳೆ ನೀವು ನನ್ನ ಮನಸ್ಸಿನ ತೋರಿಕೆಯ ಪ್ರಕಾರ ಇರುವುದಿಲ್ಲವೋ ಏನೋ? ನಾನು ನಿಮ್ಮ ಇಷ್ಟದ ಪ್ರಕಾರ ತೋರದೆ ಇರಬಹುದು. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ಕೋಪ, ಭೇದಗಳು, ಚಾಡಿ ಹೇಳುವುದು, ಹರಟೆ ಹೊಡೆಯುವುದು, ಉಬ್ಬಿಕೊಳ್ಳುವುದು, ಕಲಹ ಎಬ್ಬಿಸುವುದು, ಇವುಗಳು ಕಾಣಬರುವುದೋ ಎಂಬ ಭಯ ನನಗೆ ಉಂಟು.


ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ.


ಪ್ರಿಯರೇ, ನಿಮ್ಮಲ್ಲಿ ಯಾವನಾದರೂ ಸತ್ಯದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ,


ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.


ಹೀಗಿದ್ದರೂ ಗರ್ವಪಡುತ್ತಿದ್ದೀರಲ್ಲಾ! ನೀವು ದುಃಖಪಟ್ಟು, ಈ ಕಾರ್ಯ ಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸಬೇಕಲ್ಲವೇ?


ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.


ಕ್ರೋಧವು ಕ್ರೂರ, ಕೋಪವು ಪ್ರವಾಹ; ಆದರೆ ಅಸೂಯೆದ ಮುಂದೆ ಯಾವನು ನಿಂತಾನು?


ಶಾಂತ ಹೃದಯವು ದೇಹಕ್ಕೆ ಜೀವ; ಆದರೆ ಮತ್ಸರವು ಎಲುಬುಗಳಿಗೆ ಕ್ಷಯ.


ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.


ಸುನ್ನತಿ ಮಾಡಿಸಿಕೊಳ್ಳುವ ತಾವಾದರೋ ನಿಯಮವನ್ನು ಕೈಗೊಂಡು ನಡೆಯುವುದಿಲ್ಲ. ಆದರೆ ಅವರು ನಿಮ್ಮ ಶರೀರದ ಸುನ್ನತಿಯಿಂದ ಹೆಚ್ಚಳಪಡುವಂತೆ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.


ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ.


ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ಆದರೆ, ನೀನು ಯೆಹೂದ್ಯನೆನಿಸಿಕೊಂಡವನೂ ನಿಯಮದಲ್ಲಿ ಭರವಸೆಯಿಟ್ಟವನೂ ದೇವರಿಗೆ ಸೇರಿದವನೂ


ಅವರು ಸಕಲ ವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ, ದುಷ್ಟತ್ವ, ಹೊಟ್ಟೆಕಿಚ್ಚು, ಕೊಲೆ, ಜಗಳ, ಕಪಟ, ಹಗೆತನಗಳಿಂದಲೂ ತುಂಬಿದವರಾದರು.


“ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು.


ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.


ಯೇಸುವನ್ನು ಅವರು ಹೊಟ್ಟೆಕಿಚ್ಚಿನಿಂದ ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.


ಅನ್ಯಾಯವನ್ನು ನಾನು ನೋಡುವಂತೆ ಏಕೆ ಮಾಡುತ್ತೀರಿ? ತಪ್ಪನ್ನು ಏಕೆ ಸಹಿಸುತ್ತೀರಿ? ನಾಶವೂ ಹಿಂಸೆಯೂ ನನ್ನ ಮುಂದೆ ಇವೆ. ಹೋರಾಟವೂ ಒಡುಕೂ ಹೆಚ್ಚುತ್ತಲಿವೆ.


ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ.


ಮೂಢನನ್ನು ಅಸಮಾಧಾನವು ಕೊಲ್ಲುವುದು; ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು.


“ನೀನು ನನ್ನ ಸಂಗಡ ಬಂದು ಯೆಹೋವ ದೇವರಿಗೋಸ್ಕರ ನನಗುಂಟಾದ ಆಸಕ್ತಿಯನ್ನು ನೋಡು,” ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ಹೀಗೆ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


“ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು,


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,


ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು, ತನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡದ ಹಾಗೆ, ತನ್ನ ವೀರ್ಯವನ್ನು ನೆಲದ ಮೇಲೆ ಚೆಲ್ಲಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು