Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:18 - ಕನ್ನಡ ಸಮಕಾಲಿಕ ಅನುವಾದ

18 ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ದೇವರೊಡನೆ ಸತ್ಸಂಬಂಧವೆಂಬ ಫಲವನ್ನು ಕೊಯ್ಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಶಾಂತಿ ಸ್ಥಾಪಿಸುವುದಕ್ಕಾಗಿ ಸಮಾಧಾನಕರವಾದ ರೀತಿಯಲ್ಲಿ ಕಾರ್ಯ ಮಾಡುವವರು ಯೋಗ್ಯವಾದ ಬದುಕಿನಿಂದ ಬರುವ ಉತ್ತಮ ಫಲಗಳನ್ನು ಪಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಸಮಾದಾನ್ ಹಾನ್ತಲೆ, ಸಮಾದಾನ್ ಮನ್ತಲೆ ಭಿಂಯ್ ಪೆರುನ್, ನಿತಿವಂತ್ಪಾನ್ ಮನ್ತಲೆ ಫಳ್ ಕಮ್ವುನ್ ಘೆತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:18
13 ತಿಳಿವುಗಳ ಹೋಲಿಕೆ  

ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.


ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.


ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.


ಯಾವ ಶಿಕ್ಷೆಯಾದರೂ ಆ ಸಮಯಕ್ಕೆ ಸಂತೋಷಕರವಾಗಿ ತೋಚದೆ, ದುಃಖಕರವಾಗಿ ತೋಚುತ್ತದೆ. ತರುವಾಯ, ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನವುಳ್ಳ ನೀತಿಯ ಫಲವನ್ನು ಕೊಡುತ್ತದೆ.


ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.


ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ.


ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು.


ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷವನ್ನಾಗಿ, ನೀತಿ ಫಲವನ್ನು ಕಹಿಯನ್ನಾಗಿ ಬದಲಾಯಿಸಿದ್ದೀರಿ.


ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು.


ಮುದಿಪ್ರಾಯದಲ್ಲಿಯೂ ಫಲ ಕೊಡುವರು. ಅವರು ಹಸಿರಾಗಿ ಶೋಭಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು