Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:14 - ಕನ್ನಡ ಸಮಕಾಲಿಕ ಅನುವಾದ

14 ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ಜೀವಮಾನವು ಎಂಥದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹಬೆಯಂತಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾಳೆ ಏನಾಗುವುದೋ ನಿಮಗೆ ತಿಳಿಯದು! ನಿಮ್ಮ ಜೀವನವು ಹಬೆಯಂತಿದೆ. ನೀವು ಅದನ್ನು ಸ್ವಲ್ಪಕಾಲ ನೋಡುವಿರಿ. ನಂತರ ಅದು ಅದೃಶ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಉದ್ದ್ಯಾ ಕಾಯ್ ಹೊತಾ ಮನ್ತಲೆ ತುಮ್ಕಾ ಗೊತ್ತ್ ನಾ! ತುಮ್ಚ್ಯಾ ಜಿವನಾತ್ ತುಮಿ ಉಬೆಚ್ಯಾ ಡುಕ್ಟಾಚ್ಯಾ ಸರ್ಕೆ ಹಾಸಿ. ತೊ ಉಲ್ಲೊ ಎಳ್ ತವ್ಡೊಚ್ ದಿಸ್ತಾ ಮಾನಾ ತೊ ತುಮ್ಕಾ ದಿಸಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:14
17 ತಿಳಿವುಗಳ ಹೋಲಿಕೆ  

“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.


ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.


ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.


ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗುತ್ತವೆ; ನನ್ನ ಎಲುಬುಗಳು ಬೂದಿ ಮುಚ್ಚಿದ ಕೆಂಡದಂತೆ ಸುಟ್ಟುಹೋಗಿವೆ.


ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು.


ನನ್ನ ಆಯುಸ್ಸು ಎಷ್ಟು ಕಡಿಮೆ ಎಂದು ಜ್ಞಾಪಕಮಾಡಿಕೊಳ್ಳಿರಿ. ನಿರ್ಮಿಸಿದ ಎಲ್ಲಾ ಮನುಷ್ಯರೂ ವ್ಯರ್ಥವಾಗಿದ್ದಾರೆ.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲಾಗಿದೆ. ದೇವರು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಹಗಲುರಾತ್ರಿ ದೇವರೇ, ನೀವು ನನ್ನನ್ನು ಅಂತ್ಯಗೊಳಿಸುತ್ತೀರಿ.


ಜನರು ಬರೀ ಮಾಂಸ ಮಾತ್ರದವರೂ ತಿರುಗಿಕೊಳ್ಳದೆ ಹೋಗುವ ಗಾಳಿಯೂ ಆಗಿದ್ದಾರೆಂದು ದೇವರು ಜ್ಞಾಪಕಮಾಡಿಕೊಂಡರು.


ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.


ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಏಕೆಂದರೆ ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.


ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?


ಆದರೆ ಬರ್ಜಿಲ್ಲೈಯು ಅರಸನಿಗೆ, “ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು