Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:2 - ಕನ್ನಡ ಸಮಕಾಲಿಕ ಅನುವಾದ

2 ನೀವು ಬಯಸಿದರೂ ಪಡೆಯದೆ ಇದ್ದುದರಿಂದ ನೀವು ಕೊಲ್ಲುತ್ತೀರಿ. ದುರಾಶೆಯಿಂದ ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ ಮತ್ತು ಯುದ್ಧ ಮಾಡುತ್ತೀರಿ, ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪರರ ಆಸ್ತಿಪಾಸ್ತಿಗಳನ್ನು ಬಯಸುತ್ತೀರಿ; ಅವುಗಳು ಸಿಗದೆ ಇದ್ದಾಗ, ನೀವು ಕೊಲೆಮಾಡಲೂ ಹಿಂಜರಿಯುವುದಿಲ್ಲ. ದುರಾಶೆಗಳಿಗೆ ಬಲಿಯಾಗುತ್ತೀರಿ; ಅವುಗಳು ಈಡೇರದಾಗ ಜಗಳವಾಡುತ್ತೀರಿ, ಕಾದಾಡುತ್ತೀರಿ. ನಿಮಗೆ ಬೇಕಾದುದು ನಿಮ್ಮಲ್ಲಿಲ್ಲ. ಏಕೆಂದರೆ, ನೀವು ಅದಕ್ಕಾಗಿ ಬೇಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲೆಗಾರರಾಗುವಷ್ಟು ಹೊಟ್ಟೆಕಿಚ್ಚು ಪಟ್ಟಾದರೂ ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಯುದ್ಧಮಾಡುತ್ತೀರಿ. ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಅನೇಕ ವಸ್ತುಗಳಿಗಾಗಿ ಆಶಿಸುತ್ತೀರಿ. ಆದರೆ ಅವುಗಳನ್ನು ಪಡೆಯುವುದರಲ್ಲಿ ವಿಫಲರಾಗುತ್ತೀರಿ. ಆದ್ದರಿಂದ ನೀವು ಕೊಲೆ ಮಾಡುತ್ತೀರಿ ಮತ್ತು ಇತರರ ಬಗ್ಗೆ ಅಸೂಯೆಪಡುತ್ತೀರಿ. ಆದರೆ ನೀವು ಆಸೆಪಟ್ಟದ್ದನ್ನು ಇನ್ನೂ ಪಡೆಯಲಾರದವರಾಗಿರುವಿರಿ. ಆದ್ದರಿಂದ ನೀವು ವಾದವಿವಾದ ಮಾಡುವಿರಿ ಮತ್ತು ಹೊಡೆದಾಡುವಿರಿ. ನೀವು ದೇವರನ್ನು ಕೇಳಿಕೊಳ್ಳಲಿಲ್ಲ. ಆದ್ದರಿಂದಲೇ, ನೀವು ಆಸೆ ಪಟ್ಟದ್ದು ನಿಮಗೆ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ದೆವಾಕ್ಡೆ ಲೈ ಮಾಗ್ತ್ಯಾಸಿ ತೆ ತುಮ್ಕಾ ಗಾವಿನಾ, ತಸೆ ಹೊವ್ನ್ ತುಮಿ ಜಿವ್ ಕಾಡುಕ್ ಸೈತ್ ತಯಾರ್ ಹೊತ್ಯಾಶಿ. ಲೈ ಆಶಾ ಕರ್ತ್ಯಾಸಿ ಖರೆ ತೆ ತುಮ್ಕಾ ಗಾವಿನಾ ತಸೆ ಹೊವ್ನ್ ತುಮಿ ಝಗ್ಡೆ ಅನಿ ಮಾರಾ ಮಾರಿ ಕರ್ತ್ಯಾಸಿ ತುಮ್ಕಾ ಹೆ ಸಗ್ಳೆ ಗಾವಿನಾ. ಕಶ್ಯಾಕ್ ಮಟ್ಲ್ಯಾರ್ ತುಮಿ ಹೆ ಸಗ್ಳೆ ದೆವಾಕ್ಡೆ ಮಾಗಿನ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:2
14 ತಿಳಿವುಗಳ ಹೋಲಿಕೆ  

ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.


ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ. ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.


ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ.


ಆದರೆ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ; ಯೆಹೋವ ದೇವರನ್ನು ಪರೀಕ್ಷಿಸುವುದೂ ಇಲ್ಲ” ಎಂದನು.


ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.


ನಿಮ್ಮನ್ನು ವಿರೋಧ ಮಾಡದ ನಿರ್ದೋಷಿಗೆ ದಂಡನೆಯನ್ನು ವಿಧಿಸಿ, ಕೊಂದುಹಾಕಿದ್ದೀರಿ.


ತನ್ನ ಸಹೋದರನನ್ನು ದ್ವೇಷಿಸುವ ಯಾರೇ ಆದರೂ ಕೊಲೆಗಾರನಾಗಿದ್ದಾನೆ ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.


ಅವನು ಅವಳಿಗೆ, “ಏಕೆಂದರೆ ನಾನು ಇಜ್ರೆಯೇಲಿನವನಾದ ನಾಬೋತನ ಸಂಗಡ ಮಾತನಾಡಿ, ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಕ್ರಯಕ್ಕೆ ಕೊಡು. ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷಿತೋಟವನ್ನು ಕೊಡುವೆನು,’ ಎಂದು ಅವನಿಗೆ ಹೇಳಿದೆನು. ಅದಕ್ಕವನು, ‘ನನ್ನ ದ್ರಾಕ್ಷಿತೋಟವನ್ನು ಕೊಡುವುದಿಲ್ಲ,’ ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು