Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:11 - ಕನ್ನಡ ಸಮಕಾಲಿಕ ಅನುವಾದ

11 ಇಗೋ, ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ, ಕರ್ತದೇವರು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ತಿಳಿದು, ಕರ್ತದೇವರು ಬಹಳ ಒಳ್ಳೆಯವರೂ ದಯಾಳುವೂ ಆಗಿದ್ದಾರೆಂದು ತಿಳಿದಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಕರುಣಾಸಾಗರನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಆಯ್ಕಾ! ಸೊಸುನ್ ಘೆತಲೊ ಧನ್ಯ್, ತುಮಿ ಜೊಬಾನ್ ಸೊಸುನ್ ಘೆಟಲ್ಲ್ಯಾ ವಿಶಯಾತ್ ಆಯಿಕ್ಲ್ಯಾಶಿ ಅನಿ ಆಕ್ರಿಕ್ ಸರ್ವೆಸ್ವರ್ ದೆವಾನ್ ಕಸೆ ತೆಕಾ ದಿಲ್ಲ್ಯಾನ್ ಮನ್ತಲೆ ತುಮ್ಕಾ ಗೊತ್ತ್ ಹಾಯ್, ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ದೆವ್ ಕರಾನಾನ್‍ ಅನಿ ದಯೆನ್ ಭರಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:11
53 ತಿಳಿವುಗಳ ಹೋಲಿಕೆ  

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ


ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.


ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.


ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.


ನಿಮ್ಮ ತಂದೆಯು ಕರುಣೆಯುಳ್ಳವರಾಗಿರುವ ಪ್ರಕಾರ, ನೀವೂ ಕರುಣೆಯುಳ್ಳವರಾಗಿರಿ.


ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ. ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.


ಯೆಹೋವ ದೇವರು, ಅನುಕಂಪವೂ ದಯೆಯೂ ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ.


ಯೆಹೋವ ದೇವರು ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು, ತಿರುಗಿಬೀಳುವುದನ್ನು ಮತ್ತು ಪಾಪವನ್ನು ಕ್ಷಮಿಸುವಾತನು, ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನೂ ಎಂದು ನೀವು ಹೇಳಿದ್ದೀರಲ್ಲಾ?


ನಾವಾದರೋ ಹಿಂಜರಿದು ನಾಶವಾಗುವವರಲ್ಲ, ನಂಬುವವರಾಗಿ ಆ ರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಯೆಹೋವ ದೇವರ ಕೈಯಲ್ಲಿಯೇ ಬೀಳುತ್ತೇನೆ. ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ?


ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.


ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ, ಯೆಹೋವ ದೇವರ ಪ್ರೀತಿ ಕೃಪೆಗಳನ್ನೂ, ಯೆಹೋವ ದೇವರ ಕಾರ್ಯಗಳನ್ನು ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು. ಆತನು ತನ್ನ ಅಂತಃಕರುಣೆಯ ಪ್ರಕಾರವೂ, ತನ್ನ ಕೃಪೆಯ ಮಹಾ ಒಳ್ಳೆಯತನದ ಪ್ರಕಾರವೂ, ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.


ಪ್ರಾರಂಭಕ್ಕಿಂತ ಅದರ ಅಂತ್ಯವೇ ಲೇಸು. ಗರ್ವಿಷ್ಠನಿಗಿಂತ ತಾಳ್ಮೆಯುಳ್ಳವನೇ ಉತ್ತಮ.


ನಿಮ್ಮ ನಾಮವನ್ನು ಪ್ರೀತಿಸುವವರಿಗೆ ನೀವು ಯಾವಾಗಲೂ ಮಾಡುವಂತೆ, ನೀವು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕರುಣಿಸಿರಿ.


ಯೆಹೋವ ದೇವರು ಕೃಪೆಯೂ ನೀತಿಯೂ ಉಳ್ಳವರು ನಮ್ಮ ದೇವರು ಅನುಕಂಪ ಭರಿತರು.


ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ, ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ.


ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು. ನಿಮ್ಮ ನಿಯಮದಿಂದ ಯಾರಿಗೆ ಕಲಿಸಿಕೊಡುವಿರೋ ಅವರು ಧನ್ಯರು.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.


ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.


ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.


ಅವನಿಗೆ ಏಳುಮಂದಿ ಪುತ್ರರೂ ಮೂರು ಮಂದಿ ಪುತ್ರಿಯರೂ ಇದ್ದರು.


ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.


ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ,” ಎಂದು ಹೇಳಿದರು.


ನಾವು ಆತನಿಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದರೂ, ನಮ್ಮ ಕರ್ತದೇವರು ಕರುಣೆಯುಳ್ಳವರೂ ಕ್ಷಮಿಸುವವರೂ ಆಗಿದ್ದಾರೆ.


ಯೆಹೋವ ದೇವರು ಕೃಪಾಳುವೂ, ಅನುಕಂಪವೂ, ದೀರ್ಘಶಾಂತಿಯೂ, ಪ್ರೀತಿ ಪೂರ್ಣರೂ ಆಗಿದ್ದಾರೆ.


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ಕರುಣಿಸಿರಿ. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.


ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.


ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ.


ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.


ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು