Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:16 - ಕನ್ನಡ ಸಮಕಾಲಿಕ ಅನುವಾದ

16 ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಸೆ ಮನುನ್ ಎಕಾಮೆಕಾಚಿ ಪಾಪಾ ಸಾಂಗುನ್ ಘೆವಾ ಅನಿ ಎಕಾಮೆಕಾಸಾಟ್ನಿ ಮಾಗ್ನಿ ಕರಾ, ಅಸೆ ತುಮಿ ಗುನ್ ಹೊತ್ತ್ಯಾಸಿ ಅನಿ ಎಕ್ ನಿತಿವಂತ್ ಮಾನ್ಸಾನ್ ಕರಲ್ಲ್ಯಾ ಮಾಗ್ನಿಕ್ ಲೈ ಬಳ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:16
68 ತಿಳಿವುಗಳ ಹೋಲಿಕೆ  

ಯೆಹೋವ ದೇವರು ದುಷ್ಟರಿಗೆ ದೂರ; ಆದರೆ ನೀತಿವಂತರ ಪ್ರಾರ್ಥನೆಯನ್ನು ಅವರು ಕೇಳುತ್ತಾರೆ.


ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.


ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


ಮತ್ತು ನಾವು ಏನೇನು ಬೇಡಿಕೊಳ್ಳುತ್ತೇವೋ ಅದನ್ನು ದೇವರಿಂದ ನಾವು ಹೊಂದಿಕೊಳ್ಳುತ್ತೇವೆ. ಏಕೆಂದರೆ ನಾವು ಅವರ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಯಲ್ಲಿ ಮೆಚ್ಚಿಗೆಯಾದವುಗಳನ್ನು ಮಾಡುವವರಾಗಿದ್ದೇವೆ.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ವಿಶ್ವಾಸವಿಟ್ಟವರಲ್ಲಿ ಅನೇಕರು ಅಲ್ಲಿಗೆ ಬಂದು ತಮ್ಮ ಕೃತ್ಯಗಳನ್ನು ಅರಿಕೆಮಾಡಿದರು.


ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.


ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆಮಾಡಿದನು. ದೇವರು ಅಬೀಮೆಲೆಕನನ್ನೂ, ಅವನ ಹೆಂಡತಿಯನ್ನೂ ದಾಸಿಯರನ್ನೂ ವಾಸಿಮಾಡಿದರು. ಆದ್ದರಿಂದ ಅವರಿಗೆ ಮಕ್ಕಳಾದರು.


ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.


ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.


ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ, ಮೋಶೆಯು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು ಆಗ ಬೆಂಕಿಯು ಆರಿಹೋಯಿತು.


“ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿರಿ.” ಹೀಗೆ ಮಾಡಿದರೆ ಕುಂಟ ಕಾಲು ಉಳುಕಿಹೋಗದೆ ವಾಸಿಯಾಗುವುದು.


ಪ್ರಿಯರೇ, ನಮಗಾಗಿ ಪ್ರಾರ್ಥಿಸಿರಿ.


ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಒಬ್ಬ ಮನುಷ್ಯನ ಅವಿಧೇಯತೆಯಿಂದಾಗಿ ಅನೇಕರು, ಪಾಪಿಗಳು ಆದಂತೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದಾಗಿ ಅನೇಕರು ನೀತಿವಂತರಾಗುವರು.


ಪವಿತ್ರ ವೇದಗಳಲ್ಲಿ ಬರೆದಿರುವಂತೆ: “ನೀತಿವಂತನು ಇಲ್ಲ, ಒಬ್ಬನೂ ಇಲ್ಲ.


ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ಆಗ ಅರಸನು ಉತ್ತರವಾಗಿ ದೇವರ ಮನುಷ್ಯನಿಗೆ, “ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡು, ನನಗೋಸ್ಕರ ಪ್ರಾರ್ಥನೆ ಮಾಡು,” ಎಂದನು. ಆಗ ದೇವರ ಮನುಷ್ಯನು ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡದ್ದರಿಂದ ಅರಸನ ಕೈಗುಣವಾಗಿ, ಮುಂಚಿನ ಹಾಗೆ ಆಯಿತು.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸಿಬಿಡು. ಏಕೆಂದರೆ ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವಂತೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ, ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ,” ಎಂದರು.


ಸಮುಯೇಲನು ಯೆಹೋವ ದೇವರಿಗೆ ಮೊರೆ ಇಟ್ಟಿದ್ದರಿಂದ, ಆ ದಿವಸದಲ್ಲೇ ಯೆಹೋವ ದೇವರು ಗುಡುಗನ್ನೂ, ಮಳೆಯನ್ನೂ ಕಳುಹಿಸಿದರು. ಆಗ ಜನರೆಲ್ಲರು ಯೆಹೋವ ದೇವರಿಗೂ, ಸಮುಯೇಲನಿಗೂ ಬಹಳವಾಗಿ ಭಯಪಟ್ಟರು.


ಮೋಶೆಯು ತನ್ನ ಕೈಯನ್ನು ಎತ್ತಿದಾಗ, ಇಸ್ರಾಯೇಲರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.


ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದಾಗ, ತನ್ನ ಕೈಗಳನ್ನು ಯೆಹೋವ ದೇವರ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆಲಿಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.


ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.


ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ.


ಶಿಷ್ಯರು ಪ್ರತಿಯೊಂದು ಹಳ್ಳಿಗೆ ಹೋಗುತ್ತಾ, ಸುವಾರ್ತೆಯನ್ನು ಸಾರುತ್ತಾ, ಎಲ್ಲಾ ಕಡೆಗಳಲ್ಲಿ ರೋಗಿಗಳನ್ನು ಸ್ವಸ್ಥಮಾಡುತ್ತಾ ಹೋದರು.


“ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.


ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದರಿಂದ, ಯೆಹೋವ ದೇವರ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತನವು ಹೆಚ್ಚಾಗಿದೆ ಎಂದು ತಿಳಿದುಕೊಂಡು ನೋಡುವ ಹಾಗೆ, ನಾನು ಯೆಹೋವ ದೇವರಿಗೆ ಮೊರೆಯಿಡುವೆನು. ಆಗ ಅವರು ಗುಡುಗನ್ನೂ, ಮಳೆಯನ್ನೂ ಕಳುಹಿಸುವರು,” ಎಂದನು.


ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ,


ಯೂದಾಯ ಪ್ರಾಂತದ ಎಲ್ಲಾ ಹಳ್ಳಿಗಳಿಂದ ಮತ್ತು ಯೆರೂಸಲೇಮ್ ನಗರದಿಂದ ಎಲ್ಲಾ ಜನರು ಅವನ ಬಳಿಗೆ ಬರುತ್ತಿದ್ದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು.


ಅವಳು ಯೆಹೋವ ದೇವರ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ, ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು