Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:9 - ಕನ್ನಡ ಸಮಕಾಲಿಕ ಅನುವಾದ

9 ಪ್ರಿಯರೇ, ನೀವು ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿರಿ. ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಹೋದರರೇ, ನೀವು ಒಬ್ಬರಮೇಲೊಬ್ಬರು ಗುಣಗುಟ್ಟಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಹತ್ತಿರದಲ್ಲೇ ನಿಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಹೋದರ ಸಹೋದರಿಯರೇ, ಒಬ್ಬರ ಮೇಲೊಬ್ಬರು ದೂರದಿರಿ. ನೀವು ದೂರುವುದನ್ನು ನಿಲ್ಲಿಸದಿದ್ದರೆ ದೋಷಿಗಳೆಂದು ನಿಮಗೆ ತೀರ್ಪು ನೀಡಲಾಗುವುದು. ನ್ಯಾಯಧಿಪತಿಯು ಬರಲು ಸಿದ್ಧನಾಗಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕಾಮೆಕಾಚ್ಯಾ ವಿರೊದ್ ಪುರ್‌ಪುರುನಕಾಸಿ, ಅಸಿ ತುಮ್ಚಿ ಝಡ್ತಿ ಹೊಯ್ನಾ. ಹಿತ್ತೆ ಬಗಾ ನ್ಯಾಯ್ ಕರ್ತಲೊ ಹುಂಬ್ಡ್ಯಾರ್ ಯೆವ್ನ್ ಇಬೆ ರ್‍ಹಾಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:9
21 ತಿಳಿವುಗಳ ಹೋಲಿಕೆ  

“ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.


ಅದೇ ಪ್ರಕಾರ, ಇವೆಲ್ಲವೂ ಆಗುವುದನ್ನು ನೀವು ಕಾಣುವಾಗ, ಅಂತ್ಯವು ಬಾಗಿಲ ಹತ್ತಿರದಲ್ಲಿಯೇ ಇದೆ ಎಂದು ತಿಳಿದುಕೊಳ್ಳಿರಿ.


ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.


ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.


ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ.


ಅಂಥವರು ಬದುಕುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕಾಗಿ ಸಿದ್ಧವಾಗಿರುವ ದೇವರಿಗೆ ಲೆಕ್ಕ ಕೊಡಬೇಕಾಗುವುದು.


ಏಕೆಂದರೆ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ನಿಯಮವೆಲ್ಲಾ ಅಡಕವಾಗಿದೆ.


ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.


ಅದೇ ಪ್ರಕಾರ ಇವೆಲ್ಲವೂ ಸಂಭವಿಸುವುದನ್ನು ನೀವು ಕಾಣುವಾಗ, ಮನುಷ್ಯಪುತ್ರನಾದ ನಾನು ಬಾಗಿಲ ಹತ್ತಿರದಲ್ಲಿಯೇ ಇದ್ದೇನೆ ಎಂದು ತಿಳಿದುಕೊಳ್ಳಿರಿ.


ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ.


ಇದರಿಂದ ಹೆರೋದ್ಯಳು ಯೋಹಾನನ ಮೇಲೆ ಹಗೆಯಿಟ್ಟುಕೊಂಡು, ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.


ಅವರು ಆಹಾರಕ್ಕಾಗಿ ಅಲೆದಾಡುವರು. ತೃಪ್ತಿಯಾಗದಿದ್ದರೆ ಗೊಣಗುಟ್ಟುವರು.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.


ನಿಯಮವನ್ನು ಕೊಟ್ಟವರೂ ನ್ಯಾಯಾಧಿಪತಿಯೂ ದೇವರೊಬ್ಬರೇ ಆಗಿರುತ್ತಾರೆ. ಅವರು ಉಳಿಸುವುದಕ್ಕೂ ನಾಶಮಾಡುವುದಕ್ಕೂ ಶಕ್ತರಾಗಿದ್ದಾರೆ. ಹೀಗಿರುವಾಗ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?


ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.


ನನ್ನ ಪ್ರಿಯರೇ, ಕರ್ತದೇವರ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯವಾಗಿ ಆದರ್ಶವಾಗಿ ಇಟ್ಟುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು