Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯನ್ನು ಕರೆದು, ದೇವದರ್ಶನದ ಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಯನ್ನು ಕರೆದು, ದೇವದರ್ಶನದ ಗುಡಾರದಿಂದ ಅವನ ಸಂಗಡ ಮಾತಾಡಿ, ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತಾಡಿ ಹೀಗಂದನು - ನೀನು ಇಸ್ರಾಯೇಲ್ಯರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:1
19 ತಿಳಿವುಗಳ ಹೋಲಿಕೆ  

ಮೋಶೆಯು ದೇವರ ಸನ್ನಿಧಿಗೆ ಬೆಟ್ಟದ ಮೇಲೆ ಹೋದನು. ಆಗ ಯೆಹೋವ ದೇವರು ಸೀನಾಯಿ ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಇದನ್ನು ತಿಳಿಸು:


ನಾನು ಅಲ್ಲಿ ನಿನಗೆ ದರ್ಶನವನ್ನು ಕೊಟ್ಟು, ಕರುಣಾಸನದ ಮೇಲೆ ಒಡಂಬಡಿಕೆಯ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲರ ವಿಷಯದಲ್ಲಿ ನಾನು ನಿನಗೆ ಆಜ್ಞಾಪಿಸುವವುಗಳನ್ನೆಲ್ಲಾ ನಿನಗೆ ತಿಳಿಸುವೆನು.


“ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ದೇವದರ್ಶನದ ಗುಡಾರದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವುದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವುದು.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು.


ಈ ಪ್ರಕಾರ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರು ಅದರಂತೆಯೇ ಮಾಡಿದರು.


ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ, ಅದಕ್ಕೆ “ದೇವದರ್ಶನದ ಗುಡಾರ” ಎಂದು ಹೆಸರಿಟ್ಟನು. ತರುವಾಯ ಯೆಹೋವ ದೇವರನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನದ ಗುಡಾರಕ್ಕೆ ಹೋದರು.


ಯೆಹೋವ ದೇವರು ಮೋಶೆಗೆ, “ಬೆಟ್ಟವನ್ನೇರಿ, ನನ್ನ ಬಳಿಗೆ ಬಂದು ಇಲ್ಲೇ ಇರು. ನಿಯಮವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧನೆಮಾಡುವಂತೆ ಬರೆದಿರುವ ಕಲ್ಲಿನ ಹಲಗೆಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಹೇಳಿದರು.


ಇವುಗಳನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರು ತಮ್ಮ ಕಾಣಿಕೆಗಳನ್ನು ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಸೀನಾಯಿ ಮರುಭೂಮಿಯ ಸೀನಾಯಿ ಬೆಟ್ಟದಲ್ಲಿ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದರು.


ಅವನು ದಹನಬಲಿಯನ್ನು ತಂದು, ಅದನ್ನು ವಿಧಿಬದ್ಧವಾಗಿ ಸಮರ್ಪಿಸಿದನು.


ಅವನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವ ದೇವರು ನೋಡಿದಾಗ, ದೇವರು ಪೊದೆಯೊಳಗಿಂದ ಅವನಿಗೆ, “ಮೋಶೇ, ಮೋಶೇ,” ಎಂದು ಕರೆದರು. ಆಗ ಅವನು, “ನಾನು ಇಲ್ಲಿ ಇದ್ದೇನೆ,” ಎಂದನು.


ದೇವದರ್ಶನದ ಗುಡಾರದ ಬಳಿಯಲ್ಲಿ ದಹನಬಲಿಯ ಪೀಠವನ್ನು ಇಟ್ಟನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠ ಇಟ್ಟು ಅದರ ಮೇಲೆ ದಹನಬಲಿ ಮತ್ತು ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು:


ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,


ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠವನ್ನು ಹುಟ್ಟುಕಲ್ಲುಗಳಿಂದಲೇ ಕಟ್ಟಬೇಕು. ನೀವು ಅದರ ಮೇಲೆ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಬೇಕು.


ಬಲಿಪೀಠದ ಮೇಲೆ ದಹನಬಲಿಯನ್ನೂ ತನ್ನ ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು, ಪಾನಗಳನ್ನು ಹೊಯ್ದನು, ಸಮಾಧಾನದ ಬಲಿಗಳ ರಕ್ತವನ್ನು ಚಿಮುಕಿಸಿದನು.


ಸಭೆಯು ತಂದ ದಹನಬಲಿಗಳ ಲೆಕ್ಕವೇನೆಂದರೆ: ಎಪ್ಪತ್ತು ಹೋರಿಗಳು, ನೂರು ಟಗರುಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಯೆಹೋವ ದೇವರಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು