Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:1 - ಕನ್ನಡ ಸಮಕಾಲಿಕ ಅನುವಾದ

1 ಆರೋನನ ಪುತ್ರರಾದ ನಾದಾಬ್ ಮತ್ತು ಅಬೀಹೂ ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು, ಅದರಲ್ಲಿ ಬೆಂಕಿಯನ್ನು ಹಾಕಿ, ಅದರಲ್ಲಿ ಸುವಾಸನೆಯ ಧೂಪವನ್ನು ಹಾಕಿ, ಯೆಹೋವ ದೇವರು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆರೋನನ ಮಕ್ಕಳಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ತಮ್ಮ ತಮ್ಮ ಧೂಪ ಕಳಸಗಳಲ್ಲಿ ಸರ್ವೇಶ್ವರ ಸ್ವಾಮಿ ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆರೋನನ ಮಕ್ಕಳಲ್ಲಿ ನಾದಾಬ್ ಅಬೀಹು ಎಂಬಿಬ್ಬರು ತಮ್ಮತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ ಆರೋನನ ಪುತ್ರರಲ್ಲಿ ನಾದಾಬ ಮತ್ತು ಅಬೀಹು ಎಂಬಿಬ್ಬರು ಧೂಪ ಹಾಕಲು ಒಂದೊಂದು ಬಟ್ಟಲನ್ನು ತೆಗೆದುಕೊಂಡು ಅದರಲ್ಲಿ ಬೇರೆ ಬೆಂಕಿಯನ್ನಿಟ್ಟು ಯೆಹೋವನ ಮುಂದೆ ಧೂಪಹಾಕಿದರು. ಯೆಹೋವನ ಆಜ್ಞೆಗನುಸಾರವಾದ ಬೆಂಕಿಯನ್ನು ಅವರು ಉಪಯೋಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:1
38 ತಿಳಿವುಗಳ ಹೋಲಿಕೆ  

ಆದರೆ ನಾದಾಬನೂ ಅಬೀಹೂ ಯೆಹೋವ ದೇವರ ಮುಂದೆ ಆಜ್ಞಾಪಿಸದೇ ಇದ್ದ ಬೇರೆ ಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.


ಅವನು ಯೆಹೋವ ದೇವರ ಸನ್ನಿಧಿಯಲ್ಲಿರುವ ಬಲಿಪೀಠದಿಂದ ಬೆಂಕಿಯ ಕೆಂಡಗಳನ್ನು ಧೂಪ ಸುಡುವ ಪಾತ್ರೆಯಲ್ಲಿ ತುಂಬಿಸಿ, ತನ್ನ ಎರಡು ಕೈತುಂಬ ಪರಿಮಳ ಧೂಪದ್ರವ್ಯದ ಚೂರ್ಣವನ್ನು ತೆಗೆದುಕೊಂಡು, ತೆರೆಯನ್ನು ದಾಟಿ ತರಬೇಕು.


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.


ತರುವಾಯ ಯೆಹೋವ ದೇವರು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಮತ್ತು ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವ ದೇವರಾದ ನನ್ನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.


ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು.


ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.


“ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.


“ನನಗೆ ಯಾಜಕ ಸೇವೆ ಮಾಡುವುದಕ್ಕೆ ನೀನು ಇಸ್ರಾಯೇಲರಿಂದ ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಎಂಬುವರನ್ನು ನಿನ್ನ ಹತ್ತಿರ ಬರಮಾಡಬೇಕು.


ಆಗ ಮೋಶೆ, ಆರೋನ್, ನಾದಾಬ್, ಅಬೀಹೂ ಮತ್ತು ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಮೇಲಕ್ಕೆ ಹೋದರು.


ಆರೋನನ ಇಬ್ಬರು ಗಂಡು ಮಕ್ಕಳು ಯೆಹೋವ ದೇವರ ಸನ್ನಿಧಿಗೆ ಬಂದು ಸತ್ತಾಗ ಮೋಶೆಯಂದಿಗೆ ಯೆಹೋವ ದೇವರು ಮಾತನಾಡಿದರು.


ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.


ಅದರ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಮತ್ತು ಬಲಿಪೀಠದ ಉಪಕರಣಗಳನ್ನೆಲ್ಲಾ ಕಂಚಿನಿಂದ ಮಾಡಬೇಕು.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.


ಆಗ ತಮ್ಮ ಹೆಂಡತಿಯರು ಅನ್ಯ ದೇವತೆಗಳಿಗೆ ಧೂಪ ಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು:


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿ ಕೊಡುವುದಕ್ಕಾಗಿ ಬೆನ್ ಹಿನ್ನೋಮ್ ತಗ್ಗಿನಲ್ಲಿ ಬಾಳ್ ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೇ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆ ಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.


ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.


ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.


ಅಂದರೆ, ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ನಕ್ಷತ್ರಗಳನ್ನಾಗಲಿ, ಬೇರೆ ದೇವರುಗಳನ್ನಾಗಲಿ, ನನ್ನ ಆಜ್ಞೆಗೆ ವಿರೋಧವಾಗಿ ಅವುಗಳನ್ನು ಆರಾಧಿಸಿದರೆ,


ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.


ಅನಂತರ ಅವರು ಬಲಿಪೀಠದ ಉಪಕರಣಗಳನ್ನೆಲ್ಲಾ ಅಂದರೆ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಇವುಗಳೆನ್ನೆಲ್ಲಾ ಕಂಚಿನಿಂದ ಮಾಡಿದರು.


ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು.


ಅಭಿಷೇಕಿಸುವ ತೈಲ, ಪರಿಶುದ್ಧ ಸ್ಥಳಕ್ಕೋಸ್ಕರವಿರುವ ಪರಿಮಳ ಧೂಪ. “ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು,” ಎಂದರು.


ಕೂಡಲೇ ಯೆಹೋವ ದೇವರ ಬೆಂಕಿಯು ಇಳಿದುಬಂದು, ದಹನಬಲಿಯನ್ನೂ, ಕಟ್ಟಿಗೆಗಳನ್ನೂ, ಕಲ್ಲುಗಳನ್ನೂ, ಮಣ್ಣನ್ನೂ ಸುಟ್ಟುಬಿಟ್ಟು, ಕಾಲುವೆಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.


ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವ ದೇವರಿಗೆ ಅವರ ಅಪ್ಪಣೆಯಂತೆ ಯಜ್ಞಮಾಡುವೆವು,” ಎಂದು ಹೇಳಿದನು.


“ನೀವು ಲೇವಿಯರೊಳಗಿಂದ ಕೊಹಾತ್ಯರ ಗೋತ್ರದ ಕಟುಂಬಗಳು ನಾಶವಾಗಿ ಹೋಗದಂತೆ ನೋಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು