Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:11 - ಕನ್ನಡ ಸಮಕಾಲಿಕ ಅನುವಾದ

11 ನೀವು ಇಸ್ರಾಯೇಲರಿಗೆ ಯೆಹೋವ ದೇವರು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ, ಎಲ್ಲಾ ಕಟ್ಟಳೆಗಳನ್ನು ಬೋಧಿಸುವುದಕ್ಕಾಗಿಯೂ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನಾದ ನಾನು ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಎಲ್ಲ ಆಜ್ಞೆಗಳನ್ನು ಜನರಿಗೆ ಬೋಧಿಸಬೇಕು. ಇದು ನಿಮ್ಮ ಕರ್ತವ್ಯ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವದೂ ನಿಮ್ಮ ಕರ್ತವ್ಯವಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಮೋಶೆಯ ಮೂಲಕ ಇಸ್ರೇಲ್ ಜನರಿಗೆ ಕೊಟ್ಟ ಎಲ್ಲಾ ಕಟ್ಟಳೆಗಳನ್ನು ಅವರಿಗೆ ಬೋಧಿಸುವುದು ನಿನ್ನ ಜವಾಬ್ದಾರಿಯಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:11
16 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ಜನರು ಎದ್ದು ನಿಂತ ನಂತರ, ಅವರು ದೇವರ ನಿಯಮವನ್ನು ಸ್ಪಷ್ಟವಾಗಿ ಓದುತ್ತಾ, ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು.


ಹೀಗೆಯೇ ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಯಾಜಕನಾದ ಎಜ್ರನು ದೇವರ ನಿಯಮವನ್ನು ತೆಗೆದುಕೊಂಡು ಬಂದನು.


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ಕುಷ್ಠರೋಗಿಗಳ ವಿಷಯದಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವುದನ್ನೆಲ್ಲಾ ನೀವು ಜಾಗ್ರತೆಯಿಂದ ಕಾಪಾಡಿ ಕೈಗೊಳ್ಳುವ ಹಾಗೆ ನೋಡಿಕೊಳ್ಳಿ. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನು ನೀವು ಕಾಪಾಡಿ ಕೈಗೊಳ್ಳಬೇಕು.


ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ.


ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.


ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.


ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.


ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಯೆಹೋವ ದೇವರ ನಿಯಮದ ಗ್ರಂಥ ಇತ್ತು. ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ, ಜನರಿಗೆ ಬೋಧಿಸಿದರು.


ಅವರು ನಿಮಗೆ ಯೆಹೋವ ದೇವರು ಆಯ್ದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀವು ಮಾಡಿ, ಅವರು ನಿಮಗೆ ಬೋಧಿಸುವುದನ್ನೇ ನೀವು ಕೈಗೊಂಡು ನಡೆಯಬೇಕು.


ಅವರು ನಿಮಗೆ ಬೋಧಿಸುವ ತೀರ್ಪಿನ ಪ್ರಕಾರವೂ, ಅವರು ನಿಮಗೆ ಹೇಳುವ ನ್ಯಾಯದ ಪ್ರಕಾರವೂ ನೀವು ಮಾಡಬೇಕು. ಅವರು ನಿಮಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.


ಬಹುಕಾಲ ಇಸ್ರಾಯೇಲರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ, ನಿಯಮವಿಲ್ಲದೆ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು